ಮೈಸೂರು: ಮಂಡಲ್ ವರದಿಯ ಶಿಫಾರಸ್ಸಿನಂತೆ ಹಿಂದುಳಿದ ವರ್ಗಗಕ್ಕೆ ಶೇ.೨೮ರಷ್ಟು ಮತ್ತು ಪ್ರವರ್ಗ-೧ಕ್ಕೆ ಶೇ.೯ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಡಿ.೫ರಂದು ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹಿಸಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ಪ್ರಸ್ತುತ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ತಳ ಸಮುದಾಯಗಳನ್ನು ಮೀಸಲಾತಿ ಪ್ರಮಾಣದಿಂದ ವಂಚಿಸುವ ಹುನ್ನಾರ ನಡೆಯುತ್ತಿದೆ. ಇದರ ಭಾಗವಾಗಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ೧೦೩ನೇಯ ತಿದ್ದುಪಡಿ ತಂದು ಶೇ.೪-೫ರಷ್ಟಿರುವ ಸಮುದಾಯಗಳಿಗೆ ಆರ್ಥಿಕವಾಗಿ ಹಿಂದುಳಿದಿರುವ ಕಾರಣ ನೀಡಿ ಶೇ.೧೦ರಷ್ಟು ಮೀಸಲಾತಿ ನೀಡಿದ್ದು, ಹಿಂದುಳಿದ ವರ್ಗಗಳಿಗೂ ಕೂಡ ಕಲ್ಪಿಸಬೇಕು. ಹೀಗಾಗಿ ಇತರ ಹಿಂದುಳಿದ ವರ್ಗಗಳಿಗೂ ಕೂಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಪಡಿಸುವ ಕೋಟಾ ನಿಗದಿ ಪಡಿಸಬೇಕಾದ ಹೊಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲಿದೆ ಎಂದರು.
ಸರ್ಕಾರ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಎರಡು- ಎ ವರ್ಗಕ್ಕೆ ಶೇ. ೧೫ ರಿಂದ ೨೭ಕ್ಕೆ ಹೆಚ್ಚಿಸಬೇಕು. ಜೊತೆಗೆ ಪ್ರವರ್ಗ ಒಂದರ ಅಡಿಂಲ್ಲಿ ಬರುವ ಮೀಸಲಾತಿ ಪ್ರಮಾಣವನ್ನು ಶೇ.೪ರಿಂದ ೯ಕ್ಕೆ ಹೆಚ್ಚಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಂ ಎತ್ತಿ ಹಿಡಿಂಬೇಕು. ಇಲ್ಲದಿದ್ದಲ್ಲಿ ವರ್ಗ ಸಂಘರ್ಷ ಉಂಟಾಗಲಿದೆ. ಈ ಹಿಂದೆ ಮೀಸಲಾತಿ ಂರಿಗೂ ನೀಡಬಾರದೆಂದು ಹೋರಾಟ, ಹಿಂಸಾಚಾರಕ್ಕೆ ಕಾರಣರಾದವರೇ ಈಗ ಮೀಸಳಾತಿ ಪಡೆಂಲು ಮುಗಿಬಿದ್ದು, ಪಡೆಂತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.
ಡಿ.೫ರಂಂದು ದುಂಡಿ ಮೇಜಿನ ಸಭೆ: ಈಗ ಎಲ್ಲರೂ ಮೀಸಲಾತಿ ಪರವೇ ಇದ್ದಾರೆ. ಅಂತೂ, ಇಂತೂ ಮೀಸಲಾತಿ ಎಲ್ಲರಿಗೂ ಬೇಕು ಎಂಬ ಕಾಲಘಟ್ಟದಲ್ಲಿ ನಾವಿzವೆ. ಇದನ್ನು ಸಮರ್ಥವಾಗಿ, ಸಂವಿಧಾನದ ಆಶಂಗಳಿಗೆ ಧಕ್ಕೆ ಬಾರದ ರೀತಿಂಲ್ಲಿ ಮೀಸಲಾತಿ ಜಾರಿಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಡಿ.೫ರಂದು ಬೆಳಿಗ್ಗೆ ೧೧ಕ್ಕೆ ಜಲದರ್ಶಿನಿಯಲ್ಲಿ ದುಂಡು ಮೇಜಿನ ಸಭೆ ನಡೆಯಲಿದೆ. ಪಕ್ಷಾತೀತವಾದ ಸಭೆ ಇದಾಗಿದ್ದು, ವಿವಿಧ ಸಮುದಾಯದ ಸ್ವಾಮೀಜಿಗಳು, ಮುಖಂಡರು, ನಾಯಕರುಗಳು ಮುಂತಾದವರು ಪಾಲ್ಗೊಳ್ಳುವರು ಎಂದರು.
ಡಿ. ನಾಗಭೂಷಣ್, ಎನ್.ಆರ್. ನಾಗೇಶ್, ರವಿನಂದನ್, ಯೋಗೀಶ್ ಉಪ್ಪಾರ್, ಮೊಗಣ್ಣಾಚಾರ್, ಲೋಕೇಶ್ಕುಮಾರ್ ಮಾದಾಪುರ, ಹರೀಶ್ ಮೊಗಣ್ಣ, ಎಚ್. ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…