ಜಿಲ್ಲೆಗಳು

ಹಿಂದುಳಿದ ವರ್ಗಗಕ್ಕೆ ಮೀಸಲಾತಿ ಹೆಚ್ಚಳಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಡಿ. 5ರಂದು ದುಂಡು ಮೇಜಿನ ಸಭೆ ರಚನೆ

ಮೈಸೂರು: ಮಂಡಲ್ ವರದಿಯ ಶಿಫಾರಸ್ಸಿನಂತೆ ಹಿಂದುಳಿದ ವರ್ಗಗಕ್ಕೆ ಶೇ.೨೮ರಷ್ಟು ಮತ್ತು ಪ್ರವರ್ಗ-೧ಕ್ಕೆ ಶೇ.೯ರಷ್ಟು ಮೀಸಲಾತಿಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಡಿ.೫ರಂದು ದುಂಡು ಮೇಜಿನ ಸಭೆ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ಪ್ರಸ್ತುತ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ತಳ ಸಮುದಾಯಗಳನ್ನು ಮೀಸಲಾತಿ ಪ್ರಮಾಣದಿಂದ ವಂಚಿಸುವ ಹುನ್ನಾರ ನಡೆಯುತ್ತಿದೆ. ಇದರ ಭಾಗವಾಗಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ೧೦೩ನೇಯ ತಿದ್ದುಪಡಿ ತಂದು ಶೇ.೪-೫ರಷ್ಟಿರುವ ಸಮುದಾಯಗಳಿಗೆ ಆರ್ಥಿಕವಾಗಿ ಹಿಂದುಳಿದಿರುವ ಕಾರಣ ನೀಡಿ ಶೇ.೧೦ರಷ್ಟು ಮೀಸಲಾತಿ ನೀಡಿದ್ದು, ಹಿಂದುಳಿದ ವರ್ಗಗಳಿಗೂ ಕೂಡ ಕಲ್ಪಿಸಬೇಕು. ಹೀಗಾಗಿ ಇತರ ಹಿಂದುಳಿದ ವರ್ಗಗಳಿಗೂ ಕೂಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿ ಪಡಿಸುವ ಕೋಟಾ ನಿಗದಿ ಪಡಿಸಬೇಕಾದ ಹೊಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲಿದೆ ಎಂದರು.

ಸರ್ಕಾರ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಎರಡು- ಎ ವರ್ಗಕ್ಕೆ ಶೇ. ೧೫ ರಿಂದ ೨೭ಕ್ಕೆ ಹೆಚ್ಚಿಸಬೇಕು. ಜೊತೆಗೆ ಪ್ರವರ್ಗ ಒಂದರ ಅಡಿಂಲ್ಲಿ ಬರುವ ಮೀಸಲಾತಿ ಪ್ರಮಾಣವನ್ನು ಶೇ.೪ರಿಂದ ೯ಕ್ಕೆ ಹೆಚ್ಚಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಂ ಎತ್ತಿ ಹಿಡಿಂಬೇಕು. ಇಲ್ಲದಿದ್ದಲ್ಲಿ ವರ್ಗ ಸಂಘರ್ಷ ಉಂಟಾಗಲಿದೆ. ಈ ಹಿಂದೆ ಮೀಸಲಾತಿ ಂರಿಗೂ ನೀಡಬಾರದೆಂದು ಹೋರಾಟ, ಹಿಂಸಾಚಾರಕ್ಕೆ ಕಾರಣರಾದವರೇ ಈಗ ಮೀಸಳಾತಿ ಪಡೆಂಲು ಮುಗಿಬಿದ್ದು, ಪಡೆಂತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.

ಡಿ.೫ರಂಂದು ದುಂಡಿ ಮೇಜಿನ ಸಭೆ: ಈಗ ಎಲ್ಲರೂ ಮೀಸಲಾತಿ ಪರವೇ ಇದ್ದಾರೆ. ಅಂತೂ, ಇಂತೂ ಮೀಸಲಾತಿ ಎಲ್ಲರಿಗೂ ಬೇಕು ಎಂಬ ಕಾಲಘಟ್ಟದಲ್ಲಿ ನಾವಿzವೆ. ಇದನ್ನು ಸಮರ್ಥವಾಗಿ, ಸಂವಿಧಾನದ ಆಶಂಗಳಿಗೆ ಧಕ್ಕೆ ಬಾರದ ರೀತಿಂಲ್ಲಿ ಮೀಸಲಾತಿ ಜಾರಿಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳಕ್ಕೆ ಡಿ.೫ರಂದು ಬೆಳಿಗ್ಗೆ ೧೧ಕ್ಕೆ ಜಲದರ್ಶಿನಿಯಲ್ಲಿ ದುಂಡು ಮೇಜಿನ ಸಭೆ ನಡೆಯಲಿದೆ. ಪಕ್ಷಾತೀತವಾದ ಸಭೆ ಇದಾಗಿದ್ದು, ವಿವಿಧ ಸಮುದಾಯದ ಸ್ವಾಮೀಜಿಗಳು, ಮುಖಂಡರು, ನಾಯಕರುಗಳು ಮುಂತಾದವರು ಪಾಲ್ಗೊಳ್ಳುವರು ಎಂದರು.

ಡಿ. ನಾಗಭೂಷಣ್, ಎನ್.ಆರ್. ನಾಗೇಶ್, ರವಿನಂದನ್, ಯೋಗೀಶ್ ಉಪ್ಪಾರ್, ಮೊಗಣ್ಣಾಚಾರ್, ಲೋಕೇಶ್‌ಕುಮಾರ್ ಮಾದಾಪುರ, ಹರೀಶ್ ಮೊಗಣ್ಣ, ಎಚ್. ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿದರು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago