Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕಡೆ ಕಾರ್ತಿಕ ಸೋಮವಾರ; ನಗರದಲ್ಲಿ ಅದ್ಧೂರಿ ಆಚರಣೆ

ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ

ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.

ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. ಆದರೆ, ಈ ಬಾರಿ ನಗರದ ಹಲವಾರು ದೇವಾಲಯಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೂಜೆ-ಪುನಸ್ಕಾರಗಳು ನಡೆದವು.

ಅಗ್ರಹಾರ ಸೇರಿದಂತೆ ವಿವಿಧ ಗಣೇಶ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಕ್ಕೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಸಂಜೆ ವೇಳೆಗೆ ವಿವಿಧ ಬಡಾವಣೆಗಳ ಶಿವ ದೇವಾಲಯಗಳಲ್ಲಿ ದೀಪೋತ್ಸವ ಆರಂಭವಾಯಿತು.

ನಗರದ ಹಿನಕಲ್‌ನ ನನ್ನೇಶ್ವರ ದೇಗುಲದಲ್ಲಿ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾವಾನುಜ ರಸ್ತೆಯಲ್ಲಿರುವ ಕಾಮ ಕಾಮೇಶ್ವರಿ ದೇವಾಲಯ ಹಾಗೂ ಅಗ್ರಹಾರದಲ್ಲಿರುವ ಮಹಾ ಗಣಪತಿ ದೇವಾಲಯದಲ್ಲಿ ಸಂಜೆ ೭ ಗಂಟೆ ನಂತರ ದೀಪೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಮಹಿಳೆಯರು ದೀಪಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ದೀಪ ಬೆಳಗಿದರು.

ನಗರದ ಶ್ರೀ ರಾಂಪುರದಲ್ಲಿರುವ ಶಿವ ದೇವಾಲಯ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಶಿವಲಿಂಗೇಶ್ವರ ದೇವಾಲಯ, ಅದಿಚುಂಚನಗಿರಿ ರಸ್ತೆಯ ಮರುಳೇಶ್ವರ ದೇವಾಲಯ. ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ, ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ, ಮಂಡಿ ಮೊಹಲ್ಲಾದ ಶಿವ ದೇವಾಲಯ ಮುಂತಾದ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.


ಕೊಂಡೋತ್ಸವ: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಕೊಂಡೋತ್ಸವ ಸೇರ್ಪಡಿಸಲಾಗಿತ್ತು.
ರಾತ್ರಿ ಪೂರಾ ಸುಣ್ಣದಕೇರಿಯ ರಸ್ತೆಗಳಲ್ಲಿ ಮಹದೇಶ್ವರ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ಮುಂಜಾನೆ ಕೊಂಡೋತ್ಸವ ಜರುಗಿತು.

 

 

 

 

 

 

 

 

 

 

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!