ಚಿತ್ರಗಳು: ಗವಿಮಠ ರವಿ
ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.
ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. ಆದರೆ, ಈ ಬಾರಿ ನಗರದ ಹಲವಾರು ದೇವಾಲಯಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೂಜೆ-ಪುನಸ್ಕಾರಗಳು ನಡೆದವು.
ಅಗ್ರಹಾರ ಸೇರಿದಂತೆ ವಿವಿಧ ಗಣೇಶ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಕ್ಕೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಸಂಜೆ ವೇಳೆಗೆ ವಿವಿಧ ಬಡಾವಣೆಗಳ ಶಿವ ದೇವಾಲಯಗಳಲ್ಲಿ ದೀಪೋತ್ಸವ ಆರಂಭವಾಯಿತು.
ನಗರದ ಹಿನಕಲ್ನ ನನ್ನೇಶ್ವರ ದೇಗುಲದಲ್ಲಿ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.
ರಾವಾನುಜ ರಸ್ತೆಯಲ್ಲಿರುವ ಕಾಮ ಕಾಮೇಶ್ವರಿ ದೇವಾಲಯ ಹಾಗೂ ಅಗ್ರಹಾರದಲ್ಲಿರುವ ಮಹಾ ಗಣಪತಿ ದೇವಾಲಯದಲ್ಲಿ ಸಂಜೆ ೭ ಗಂಟೆ ನಂತರ ದೀಪೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಮಹಿಳೆಯರು ದೀಪಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ದೀಪ ಬೆಳಗಿದರು.
ನಗರದ ಶ್ರೀ ರಾಂಪುರದಲ್ಲಿರುವ ಶಿವ ದೇವಾಲಯ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಶಿವಲಿಂಗೇಶ್ವರ ದೇವಾಲಯ, ಅದಿಚುಂಚನಗಿರಿ ರಸ್ತೆಯ ಮರುಳೇಶ್ವರ ದೇವಾಲಯ. ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ, ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ, ಮಂಡಿ ಮೊಹಲ್ಲಾದ ಶಿವ ದೇವಾಲಯ ಮುಂತಾದ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.
ಕೊಂಡೋತ್ಸವ: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಕೊಂಡೋತ್ಸವ ಸೇರ್ಪಡಿಸಲಾಗಿತ್ತು.
ರಾತ್ರಿ ಪೂರಾ ಸುಣ್ಣದಕೇರಿಯ ರಸ್ತೆಗಳಲ್ಲಿ ಮಹದೇಶ್ವರ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ಮುಂಜಾನೆ ಕೊಂಡೋತ್ಸವ ಜರುಗಿತು.
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…