ಜಿಲ್ಲೆಗಳು

ಕಡೆ ಕಾರ್ತಿಕ ಸೋಮವಾರ; ನಗರದಲ್ಲಿ ಅದ್ಧೂರಿ ಆಚರಣೆ

ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ

ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.

ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. ಆದರೆ, ಈ ಬಾರಿ ನಗರದ ಹಲವಾರು ದೇವಾಲಯಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೂಜೆ-ಪುನಸ್ಕಾರಗಳು ನಡೆದವು.

ಅಗ್ರಹಾರ ಸೇರಿದಂತೆ ವಿವಿಧ ಗಣೇಶ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಕ್ಕೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಸಂಜೆ ವೇಳೆಗೆ ವಿವಿಧ ಬಡಾವಣೆಗಳ ಶಿವ ದೇವಾಲಯಗಳಲ್ಲಿ ದೀಪೋತ್ಸವ ಆರಂಭವಾಯಿತು.

ನಗರದ ಹಿನಕಲ್‌ನ ನನ್ನೇಶ್ವರ ದೇಗುಲದಲ್ಲಿ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾವಾನುಜ ರಸ್ತೆಯಲ್ಲಿರುವ ಕಾಮ ಕಾಮೇಶ್ವರಿ ದೇವಾಲಯ ಹಾಗೂ ಅಗ್ರಹಾರದಲ್ಲಿರುವ ಮಹಾ ಗಣಪತಿ ದೇವಾಲಯದಲ್ಲಿ ಸಂಜೆ ೭ ಗಂಟೆ ನಂತರ ದೀಪೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಮಹಿಳೆಯರು ದೀಪಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ದೀಪ ಬೆಳಗಿದರು.

ನಗರದ ಶ್ರೀ ರಾಂಪುರದಲ್ಲಿರುವ ಶಿವ ದೇವಾಲಯ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಶಿವಲಿಂಗೇಶ್ವರ ದೇವಾಲಯ, ಅದಿಚುಂಚನಗಿರಿ ರಸ್ತೆಯ ಮರುಳೇಶ್ವರ ದೇವಾಲಯ. ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ, ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ, ಮಂಡಿ ಮೊಹಲ್ಲಾದ ಶಿವ ದೇವಾಲಯ ಮುಂತಾದ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.


ಕೊಂಡೋತ್ಸವ: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಕೊಂಡೋತ್ಸವ ಸೇರ್ಪಡಿಸಲಾಗಿತ್ತು.
ರಾತ್ರಿ ಪೂರಾ ಸುಣ್ಣದಕೇರಿಯ ರಸ್ತೆಗಳಲ್ಲಿ ಮಹದೇಶ್ವರ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ಮುಂಜಾನೆ ಕೊಂಡೋತ್ಸವ ಜರುಗಿತು.

 

 

 

 

 

 

 

 

 

 

 

 

andolana

Recent Posts

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

58 seconds ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

9 mins ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

13 mins ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

2 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

3 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago