ಜಿಲ್ಲೆಗಳು

ಕಡೆ ಕಾರ್ತಿಕ ಸೋಮವಾರ; ನಗರದಲ್ಲಿ ಅದ್ಧೂರಿ ಆಚರಣೆ

ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ

ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.

ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. ಆದರೆ, ಈ ಬಾರಿ ನಗರದ ಹಲವಾರು ದೇವಾಲಯಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೂಜೆ-ಪುನಸ್ಕಾರಗಳು ನಡೆದವು.

ಅಗ್ರಹಾರ ಸೇರಿದಂತೆ ವಿವಿಧ ಗಣೇಶ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಕ್ಕೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಸಂಜೆ ವೇಳೆಗೆ ವಿವಿಧ ಬಡಾವಣೆಗಳ ಶಿವ ದೇವಾಲಯಗಳಲ್ಲಿ ದೀಪೋತ್ಸವ ಆರಂಭವಾಯಿತು.

ನಗರದ ಹಿನಕಲ್‌ನ ನನ್ನೇಶ್ವರ ದೇಗುಲದಲ್ಲಿ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾವಾನುಜ ರಸ್ತೆಯಲ್ಲಿರುವ ಕಾಮ ಕಾಮೇಶ್ವರಿ ದೇವಾಲಯ ಹಾಗೂ ಅಗ್ರಹಾರದಲ್ಲಿರುವ ಮಹಾ ಗಣಪತಿ ದೇವಾಲಯದಲ್ಲಿ ಸಂಜೆ ೭ ಗಂಟೆ ನಂತರ ದೀಪೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಮಹಿಳೆಯರು ದೀಪಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ದೀಪ ಬೆಳಗಿದರು.

ನಗರದ ಶ್ರೀ ರಾಂಪುರದಲ್ಲಿರುವ ಶಿವ ದೇವಾಲಯ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಶಿವಲಿಂಗೇಶ್ವರ ದೇವಾಲಯ, ಅದಿಚುಂಚನಗಿರಿ ರಸ್ತೆಯ ಮರುಳೇಶ್ವರ ದೇವಾಲಯ. ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ, ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ, ಮಂಡಿ ಮೊಹಲ್ಲಾದ ಶಿವ ದೇವಾಲಯ ಮುಂತಾದ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.


ಕೊಂಡೋತ್ಸವ: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಕೊಂಡೋತ್ಸವ ಸೇರ್ಪಡಿಸಲಾಗಿತ್ತು.
ರಾತ್ರಿ ಪೂರಾ ಸುಣ್ಣದಕೇರಿಯ ರಸ್ತೆಗಳಲ್ಲಿ ಮಹದೇಶ್ವರ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ಮುಂಜಾನೆ ಕೊಂಡೋತ್ಸವ ಜರುಗಿತು.

 

 

 

 

 

 

 

 

 

 

 

 

andolana

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

3 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

5 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

6 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

7 hours ago