ಜಿಲ್ಲೆಗಳು

ಕಡೆ ಕಾರ್ತಿಕ ಸೋಮವಾರ; ನಗರದಲ್ಲಿ ಅದ್ಧೂರಿ ಆಚರಣೆ

ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ

ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.

ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. ಆದರೆ, ಈ ಬಾರಿ ನಗರದ ಹಲವಾರು ದೇವಾಲಯಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೂಜೆ-ಪುನಸ್ಕಾರಗಳು ನಡೆದವು.

ಅಗ್ರಹಾರ ಸೇರಿದಂತೆ ವಿವಿಧ ಗಣೇಶ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಕ್ಕೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಸಂಜೆ ವೇಳೆಗೆ ವಿವಿಧ ಬಡಾವಣೆಗಳ ಶಿವ ದೇವಾಲಯಗಳಲ್ಲಿ ದೀಪೋತ್ಸವ ಆರಂಭವಾಯಿತು.

ನಗರದ ಹಿನಕಲ್‌ನ ನನ್ನೇಶ್ವರ ದೇಗುಲದಲ್ಲಿ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾವಾನುಜ ರಸ್ತೆಯಲ್ಲಿರುವ ಕಾಮ ಕಾಮೇಶ್ವರಿ ದೇವಾಲಯ ಹಾಗೂ ಅಗ್ರಹಾರದಲ್ಲಿರುವ ಮಹಾ ಗಣಪತಿ ದೇವಾಲಯದಲ್ಲಿ ಸಂಜೆ ೭ ಗಂಟೆ ನಂತರ ದೀಪೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಮಹಿಳೆಯರು ದೀಪಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ದೀಪ ಬೆಳಗಿದರು.

ನಗರದ ಶ್ರೀ ರಾಂಪುರದಲ್ಲಿರುವ ಶಿವ ದೇವಾಲಯ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಶಿವಲಿಂಗೇಶ್ವರ ದೇವಾಲಯ, ಅದಿಚುಂಚನಗಿರಿ ರಸ್ತೆಯ ಮರುಳೇಶ್ವರ ದೇವಾಲಯ. ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ, ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ, ಮಂಡಿ ಮೊಹಲ್ಲಾದ ಶಿವ ದೇವಾಲಯ ಮುಂತಾದ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.


ಕೊಂಡೋತ್ಸವ: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಕೊಂಡೋತ್ಸವ ಸೇರ್ಪಡಿಸಲಾಗಿತ್ತು.
ರಾತ್ರಿ ಪೂರಾ ಸುಣ್ಣದಕೇರಿಯ ರಸ್ತೆಗಳಲ್ಲಿ ಮಹದೇಶ್ವರ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ಮುಂಜಾನೆ ಕೊಂಡೋತ್ಸವ ಜರುಗಿತು.

 

 

 

 

 

 

 

 

 

 

 

 

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago