ಜಿಲ್ಲೆಗಳು

ಕಡೆ ಕಾರ್ತಿಕ ಸೋಮವಾರ; ನಗರದಲ್ಲಿ ಅದ್ಧೂರಿ ಆಚರಣೆ

ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ

ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.

ಕೊರೊನಾ ಸಮಸ್ಯೆಯಿಂದಾಗಿ ಕಳೆದ ಎರಡು ವರ್ಷಗಳಿಂದ ಕಾರ್ತಿಕ ಮಾಸದ ಧಾರ್ಮಿಕ ಆಚರಣೆ ಕಳೆಗುಂದಿತ್ತು. ಆದರೆ, ಈ ಬಾರಿ ನಗರದ ಹಲವಾರು ದೇವಾಲಯಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೂಜೆ-ಪುನಸ್ಕಾರಗಳು ನಡೆದವು.

ಅಗ್ರಹಾರ ಸೇರಿದಂತೆ ವಿವಿಧ ಗಣೇಶ ದೇವಸ್ಥಾನಗಳಲ್ಲಿ ಗಣೇಶ ವಿಗ್ರಹಕ್ಕೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಸಂಜೆ ವೇಳೆಗೆ ವಿವಿಧ ಬಡಾವಣೆಗಳ ಶಿವ ದೇವಾಲಯಗಳಲ್ಲಿ ದೀಪೋತ್ಸವ ಆರಂಭವಾಯಿತು.

ನಗರದ ಹಿನಕಲ್‌ನ ನನ್ನೇಶ್ವರ ದೇಗುಲದಲ್ಲಿ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ನೂರಾರು ಮಂದಿ ದೇವಾಲಯಕ್ಕೆ ಆಗಮಿಸಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾವಾನುಜ ರಸ್ತೆಯಲ್ಲಿರುವ ಕಾಮ ಕಾಮೇಶ್ವರಿ ದೇವಾಲಯ ಹಾಗೂ ಅಗ್ರಹಾರದಲ್ಲಿರುವ ಮಹಾ ಗಣಪತಿ ದೇವಾಲಯದಲ್ಲಿ ಸಂಜೆ ೭ ಗಂಟೆ ನಂತರ ದೀಪೋತ್ಸವ ಕಾರ್ಯಕ್ರಮ ನಡೆಯಿತು. ನೂರಾರು ಮಹಿಳೆಯರು ದೀಪಗಳೊಂದಿಗೆ ದೇವಾಲಯಕ್ಕೆ ಆಗಮಿಸಿ ದೀಪ ಬೆಳಗಿದರು.

ನಗರದ ಶ್ರೀ ರಾಂಪುರದಲ್ಲಿರುವ ಶಿವ ದೇವಾಲಯ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಶಿವಲಿಂಗೇಶ್ವರ ದೇವಾಲಯ, ಅದಿಚುಂಚನಗಿರಿ ರಸ್ತೆಯ ಮರುಳೇಶ್ವರ ದೇವಾಲಯ. ಕೆ.ಜಿ.ಕೊಪ್ಪಲಿನ ಚಂದ್ರಮೌಳೇಶ್ವರ, ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ, ಮಂಡಿ ಮೊಹಲ್ಲಾದ ಶಿವ ದೇವಾಲಯ ಮುಂತಾದ ದೇವಾಲಯಗಳಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.


ಕೊಂಡೋತ್ಸವ: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಕೊಂಡೋತ್ಸವ ಸೇರ್ಪಡಿಸಲಾಗಿತ್ತು.
ರಾತ್ರಿ ಪೂರಾ ಸುಣ್ಣದಕೇರಿಯ ರಸ್ತೆಗಳಲ್ಲಿ ಮಹದೇಶ್ವರ ಸ್ವಾಮಿ ಮೂರ್ತಿ ಮೆರವಣಿಗೆ ನಡೆಯಿತು. ಮುಂಜಾನೆ ಕೊಂಡೋತ್ಸವ ಜರುಗಿತು.

 

 

 

 

 

 

 

 

 

 

 

 

andolana

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

5 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

5 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

6 hours ago