ಹನೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದ ಕಾಲು ದಾರಿ ಮೂಲಕ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಮ.ಬೆಟ್ಟ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಬುಧವಾರ ಜರುಗಿದೆ.
ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರನ ಹೊಲ ಗ್ರಾಮದ ನಿವಾಸಿಗಳಾದ ಪುಟ್ಟಸ್ವಾಮಿ, ಶಂಕಣ್ಣ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ವೀರಣ್ಣ ಪರಾರಿಯಾಗಿದ್ದಾನೆ.
ಘಟನೆಯ ವಿವರ :ರೈತರ ಸೋಗಿನಲ್ಲಿ ಕಾಡು ದಾರಿಯ ಮೂಲಕ ನಡೆದುಕೊಂಡು ತಮಿಳುನಾಡಿನ ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮ ಬೆಟ್ಟ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಬಸವರಾಜು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ 3 ಹಸು, 1 ಹೋರಿ, 1 ಕರುವನ್ನು ರಕ್ಷಿಸಿ ,ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಕುರುಬೂರು ಸಮೀಪದ ಪಶು ಪಾಲನಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ದಾಳಿಯಲ್ಲಿ ಮುಖ್ಯ ಪೇದೆಗಳಾದ ಗೋವಿಂದರಾಜು ಅಸ್ಲಮ್ ಪಾಶ, ಬಸವರಾಜೇಂದ್ರ ಪೇದೆಗಳಾದ ಜಯರಾಮ್ ವಿಶ್ವನಾಥ್ ಪಾಲ್ಗೊಂಡಿದ್ದರು.
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…
ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…