ಚಾಮರಾಜನಗರ: ತಾಲ್ಲೂಕಿನ ಕಟ್ನವಾಡಿ ಗ್ರಾಮದ ಗುರು ಎಂಬುವವರ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಸಂಜೆ ಕಬ್ಬಿನ ಗದ್ದೆಯೊಳಗೆ ಮರಿಗಳು ಪತ್ತೆಯಾದ ವಿಷಯವನ್ನು ಗುರು ಅವರು ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ ವಲಯಾರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಸ್ಥಳಕ್ಕೆ ತೆರಳಿದ ಕೆ.ಗುಡಿ ವಲಯಾರಣ್ಯಾಧಿಕಾರಿ ವಿನೋದ್ ಗೌಡ, ಉಪ ವಲಯಾರಣ್ಯಾಧಿಕಾರಿ ಅಮರನಾಥ್ ಹಾಗೂ ಇತರರು ಚಿರತೆ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ.
15 ದಿನಗಳ ಮರಿಗಳಾಗಿದ್ದು, ಅವು ದೊರೆತ ಸ್ಥಳದಲ್ಲಿಯೇ ಟ್ರೇನಲ್ಲಿಟ್ಟು ತಾಯಿ ಚಿರತೆಯ ಬರುವಿಕೆಗಾಗಿ ಕಾಯಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿ ತಾಯಿ ಚಿರತೆ ಮರಿಗಳನ್ನು ಹುಡುಕಿಕೊಂಡು
ಬಾರದಿದ್ದರೆ ಬೆಳಗ್ಗೆ ಮರಿಗಳನ್ನು ಎಲ್ಲಿಗೆ ಸಾಗಿಸಿ ಆರೈಕೆ ಮಾಡಬೇಕೆಂದು ಹಿರಿಯ ಅರಣ್ಯಾಧಿಕಾರಿಗಳ ಸಲಹೆ ಪಡೆಯಲಾಗುವುದು ಎಂದು ವಿನೋದ್ ಗೌಡ ಅವರು ತಿಳಿಸಿದ್ದಾರೆ.
ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…