ಜಿಲ್ಲೆಗಳು

ಕಟ್ನವಾಡಿ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪ್ರತ್ಯಕ್ಷ

ಚಾಮರಾಜನಗರ: ತಾಲ್ಲೂಕಿನ ಕಟ್ನವಾಡಿ ಗ್ರಾಮದ ಗುರು ಎಂಬುವವರ ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಭಾನುವಾರ ಸಂಜೆ ಕಬ್ಬಿನ ಗದ್ದೆಯೊಳಗೆ ಮರಿಗಳು ಪತ್ತೆಯಾದ ವಿಷಯವನ್ನು ಗುರು ಅವರು ಬಿಳಿಗಿರಿರಂ‌ಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ ವಲಯಾರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ತೆರಳಿದ ಕೆ.ಗುಡಿ ವಲಯಾರಣ್ಯಾಧಿಕಾರಿ ವಿನೋದ್ ಗೌಡ, ಉಪ ವಲಯಾರಣ್ಯಾಧಿಕಾರಿ ಅಮರನಾಥ್ ಹಾಗೂ ಇತರರು ಚಿರತೆ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ.
15 ದಿನಗಳ ಮರಿಗಳಾಗಿದ್ದು, ಅವು ದೊರೆತ ಸ್ಥಳದಲ್ಲಿಯೇ ಟ್ರೇನಲ್ಲಿಟ್ಟು ತಾಯಿ ಚಿರತೆಯ ಬರುವಿಕೆಗಾಗಿ ಕಾಯಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ ತಾಯಿ ಚಿರತೆ ಮರಿಗಳನ್ನು ಹುಡುಕಿಕೊಂಡು
ಬಾರದಿದ್ದರೆ ಬೆಳಗ್ಗೆ ಮರಿಗಳನ್ನು ಎಲ್ಲಿಗೆ ಸಾಗಿಸಿ ಆರೈಕೆ ಮಾಡಬೇಕೆಂದು ಹಿರಿಯ ಅರಣ್ಯಾಧಿಕಾರಿಗಳ ಸಲಹೆ ಪಡೆಯಲಾಗುವುದು ಎಂದು ವಿನೋದ್ ಗೌಡ ಅವರು ತಿಳಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago