ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ.
ಈ ಬಗ್ಗೆ ಡಿಸಿಎಫ್ ಕರಿಕಾಳನ್ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ 2 ನೇ ಹಂತದ ಸಾಂಪ್ರದಾಯಿಕ ಪೂಜೆ ನೆರವೇರಬೇಕಿತ್ತು, ಆದರೆ ಸಚಿವರ ನಿಧನದ ಹಿನ್ನೆಲೆಯಲ್ಲಿ ಪೂಜೆಯನ್ನು ರದ್ದುಗೊಳಿಸಲಾಗಿದೆ ಎಂದರು.
ನಾಳೆ ಗಜಪಡೆಗಳಿಗೆ ಸಿಡಿಮದ್ದು ತಾಲೀಮು : ದಸರಾ ಗಜಪಡೆಯ ಆನೆಗಳಿಗೆ ಮೊದಲ ಹಂತದಲ್ಲಿ ಸಿಡಿಮದ್ದು ತಾಲೀಮು ನಡೆಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಸೆ. 9 ರಂದು ಮೊದಲ ಹಂತದಲ್ಲಿ ಆಗಮಿಸಿದ 9 ಗಜಪಡೆಗಳಿಗೆ ಹಾಗೂ 2ನೇ ಹಂತದ 5 ಗಜಪಡೆಗಳನ್ನು ಒಟ್ಟಾಗಿ ತೂಕ ಹಾಕಿಸಲಾಗುವುದು ಎಂದು ಡಿಸಿಎಫ್ ಕರಿಕಾಳನ್ ಅವರು ಮಾಹಿತಿ ನೀಡಿದ್ದಾರೆ.
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…