ಜಿಲ್ಲೆಗಳು

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ದಿನಗಣನೆ

ಅಕ್ಷಯ ಪಾತ್ರೆ, ಕಾಣಿಕೆ ಡಬ್ಬಿ ಇಡುವ ಕಾರ್ಯಕ್ರಮ ಇಂದು : ಭಾಗಮಂಡಲದಲ್ಲಿ ಅಗತ್ಯ ಸಿದ್ಧತೆ

ನವೀನ್ ಡಿಸೋಜ
ಮಡಿಕೇರಿ: ಕೊಡಗಿನ ಜನತೆಯ ಆರಾಧ್ಯ ದೇವತೆ, ವಾತೆ ಕಾವೇರಿ ತೀರ್ಥ ರೂಪಿಣಿಯಾಗಿ ಆವಿರ್ಭವಿಸುವ ತುಲಾಸಂಕ್ರಮಣ ಜಾತ್ರೆ ಅ.೧೭ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ.
ಪ್ರಸಕ್ತ ಸಾಲಿನಲ್ಲಿ ಕಾವೇರಿುಯ ತೀರ್ಥೋದ್ಭವ ಅ.೧೭ ರಂದು ರಾತ್ರಿ ೭.೨೧ ಗಂಟೆಗೆ ಮೇಷ ಲಗ್ನದಲ್ಲಿ ಘಟಿಸಲಿದೆ. ತುಲಾ ಸಂಕ್ರಮಣ ಜಾತ್ರೆಗೂ ಮುಂಚಿತವಾಗಿ ಕಳೆದ ಸೆ.೨೭ ರಂದು ಭಾಗಮಂಡಲದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು ಕಾರ್ಯಕ್ರಮ, ಅ.೫ರಂದು ಆಜ್ಞಾ ಮುಹೂರ್ತ ಕಾರ್ಯಕ್ರಮಗಳು ನಡೆದಿವೆ. ಅ.೧೫ರಂದು ಬೆಳಿಗ್ಗೆ ೧೧.೪೫ ನಿಮಿಷಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು ಮತ್ತು ಸಂಜೆ ೦೪.೧೫ ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇಡುವುದು ಕಾರ್ಯಕ್ರಮಗಳು ನಡೆಯಲಿವೆ.
ತೀರ್ಥೋದ್ಭವದ ಕ್ಷಣವನ್ನು ಮನದುಂಬಿಕೊಂಡು ಕಾವೇರಿ ತೀರ್ಥವನ್ನು ಕೊಂಡೊಯ್ಯಲು ಜಿಲ್ಲೆಯಾದ್ಯಂತ ಹಾಗೂ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಜನರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಭಾಗಮಂಡಲ ಮತ್ತು ತಲಕಾವೇರಿುಂಲ್ಲಿ ಸಂಪ್ರದಾಯದಂತೆ ನಡೆಸುವ ಪೂಜೆ ಮತ್ತು ಧಾರ್ಮಿಕ ಆಚರಣೆಗಳಿಗೆ ಪೂರಕವಾದ ಸಿದ್ಧತೆಗಳಿಗೆ ಜಿಲ್ಲಾಡಳಿತ ಒತ್ತು ನೀಡಿದೆ.
ಸಂಪ್ರದಾಯದಂತೆ ಕಾವೇರಿಯ ಕ್ಷೇತ್ರಕ್ಕೆ ಆಗಮಿಸುವವರು ಮೊದಲು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ವಾಡಿ, ತ್ರಿವೇಣಿ ಸಂಗಮದಲ್ಲಿ ಪಿತೃಗಳಿಗೆ ಪಿಂಡ ಪ್ರಧಾನ ವಾಡುವುದು, ಶ್ರೀ ಭಗಂಡೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಇದಕ್ಕೆ ಅನುಗುಣವಾದ ಕೆಲಸ ಕಾರ್ಯಗಳು ನಡೆಯುತ್ತಿವೆ.
ಪ್ರಸ್ತುತ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕ್ಷೀಣಿಸಿದ್ದು, ಕೇವಲ ಒಂದೆರಡು ಅಡಿಗಳಷ್ಟೆ ನೀರು ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ಸಂಗ್ರಹವಾಗಿರುವ ಹೂಳು ಮಿಶ್ರಿತ ಭಾರೀ ಪ್ರವಾಣದ ಮರಳನ್ನು ತೆಗೆಯುವ ಕೆಲಸ ವಾಡಲಾಗಿದೆ. ಹೂಳು ಮಿಶ್ರಿತ ಮರಳನ್ನು ತೆಗೆದು, ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಅನುಕೂಲವಾಗುವಂತೆ ಅಲ್ಲೇ ಸಮೀಪದ ಸೇತುವೆಯ ಬಳಿ ನೀರನ್ನು ತಡೆಹಿಡಿಯುವ ಕೆಲಸ ಮಾಡಲಾಗಿದೆ.
ಸಾವಾನ್ಯವಾಗಿ ಕ್ಷೇತ್ರಕ್ಕೆ ಭೇಟಿ ನೀಡುವವರು ತಮ್ಮ ಪಿತೃಗಳಿಗೆ ಪಿಂಡ ಪ್ರದಾನ ವಾಡುವ ಕಾರ್ಯ ತ್ರಿವೇಣಿ ಸಂಗಮದ ಬಳಿಯ ದಡದಲ್ಲಿ ನಡೆಸುತ್ತಾರೆ. ನದಿ ದಂಡೆಯಲ್ಲಿನ ಹೆಚ್ಚುವರಿ ಮಣ್ಣನ್ನು ತೆಗೆದು ಪಿತೃ ಕಾರ್ಯಗಳಿಗೆ ಅನುಕೂಲ ಕಲ್ಪಿಸುವ ಮುಖ್ಯ ಕಾರ್ಯವನ್ನು ಇದೀಗ ನಡೆಸಲಾಗುತ್ತಿದೆ.
ಜೀವನದಿ ಕಾವೇರಿಯ ತೀರ್ಥೋದ್ಭವದ ತುಲಾ ಸಂಕ್ರಮಣ ಜಾತ್ರೆಯ ಹಿನ್ನೆಲೆ ದೇಗುಲವನ್ನು ಒಳಗೊಂಡಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ, ಸುಣ್ಣ ಬಣ್ಣ ಬಳಿಯುವ ಕಾರ್ಯಗಳು ಚುರುಕಿನಿಂದ ನಡೆಯುತ್ತಿದೆ. ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ನಡೆದಿದೆ. ಬೆಳಕಿನ ವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.


ಗುಂಡಿ ಬಿದ್ದಿರುವ ರಸ್ತೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಪೂಜಾ ಪದ್ಧತಿಯಲ್ಲಿ ಯಾವ ಗೊಂದಲವಿಲ್ಲದೆ ಈ ಹಿಂದೆ ಆಚರಿಸಿಕೊಂಡು ಬಂದ ರೀತಿಯಲ್ಲಿ ಈ ಬಾರಿಯೂ ನಡೆಸಿಕೊಂಡು ಹೋಗಲಾಗುತ್ತದೆ. ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಆಗಮಿಸುವ ಜನರಿಗೆ ಅಗತ್ಯ ಭದ್ರತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು.
-ಡಾ.ನಂಜುಂಡೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ


ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಂಚಾರ ವ್ಯವಸ್ಥೆಗೆ ಯಾವ ರೀತಿ ಅಡಚಣೆಯಾಗದ ರೀತಿಯಲ್ಲಿ ಸೂಕ್ತ ಕ್ರಮ ವಹಿಸಲಾಗುವುದು. ವಾಹನ ನಿಲುಗಡೆ ಹಾಗೂ ಕುಂಡಿಕೆಯು ಸುತ್ತಮುತ್ತಲು ಮುಂಜಾಗ್ರತೆ ಕ್ರಮ ವಹಿಸಲಾಗುವುದು.
-ಗಜೇಂದ್ರ ಪ್ರಸಾದ್, ಉಪ ಪೊಲೀಸ್ ವರಿಷ್ಠಾಧಿಕಾರಿ

 

andolanait

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

26 mins ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

2 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

2 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

2 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

2 hours ago