ಜಿಲ್ಲೆಗಳು

ಕಾಯಕ ಮತ್ತು ದಾಸೋಹ ಸಮಾಜದ ಎರಡು ಕಣ್ಣುಗಳು – ದೇಚಿ

ಮೈಸೂರು : ನಗರದ ಪಡುವಲು ಶ್ರೀ ವಿರಕ್ತ ಮಠದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಿಡುಗಲು ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಸರಗೂರು  ಇವರ ವತಿಯಿಂದ ನಡೆದ  ದತ್ತಿ ಉಪನ್ಯಾಸ ಸಮಾರಂಭದಲ್ಲಿ ಪ್ರವಚನ ನೀಡಿದ ಸಾಹಿತಿ ದೇವರಾಜು ಪಿ. ಚಿಕ್ಕಹಳ್ಳಿ (ದೇಚಿ)ರವರು ಪರಿಶುದ್ಧ ಕಾಯಕದಿಂದ ಬಂದ ಹಣದಿಂದ ದಾಸೋಹವನ್ನು ನಡೆಸಬೇಕು, ಅದಕ್ಕಾಗಿಯೇ ೧೨ ನೇ ಶತಮಾನದ ಶರಣರು ಇಂದಿಗೂ ಜೀವಂತವಾಗಿದ್ದಾರೆ. ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ ಎಂದರು.

ಮುಂದುವರಿದು ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ. ಅನೇಕ ಶರಣರು ತಮ್ಮ ಹೆಸರುಗಳ ಹಿಂದೆ ತಮ್ಮ ತಮ್ಮ ಕಾಯಕದ ಹೆಸರನ್ನು ಬರೆದು ಕಾಯಕ ಸಮಾಜದ ಮಹತ್ವವನ್ನು ಸಾರಿದ್ದರು. ದಾಸೋಹವೆಂಬುದು ದಾನಕ್ಕಿಂತಲೂ ಶ್ರೇಷ್ಠ, ನಮ್ಮದು ದಾಸೋಹ ಪರಂಪರೆ, ದಾನವೆಂಬ ಪದಕ್ಕೆ ಜಾಗವಿರಕೂಡದು ಕಾರಣ ಈ ಜಗತ್ತಿನ ಏಕೈಕ ದಾನಿ ಮಹಾದೇವನೊಬ್ಬನೇ. ಹಾಗಾಗಿ ಕಾಯಕ ಮತ್ತು ದಾಸೋಹ ಎರಡೂ ಈ ಸಮಾಜದ ಕಣ್ಣುಗಳು ಎನ್ನುತ್ತಾ ಹಲವು ವಚನಗಳನ್ನು ನಿರ್ವಚನ ಮಾಡುತ್ತಾ ಶರಣ ಬಂಧುಗಳ ಮನ ಮುಟ್ಟಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹೆಳವರಹುಂಡಿ ಸಿದ್ದಪ್ಪನವರು ತಮ್ಮ ಭಾಷಣದಲ್ಲಿ ಶರಣ ಬಂಧುಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಸಾಧನೆ ಮಾಡಬೇಕು. ಸುಧೀರ್ಘ ಇತಿಹಾಸವನ್ನು ಹೊಂದಿರುವ ನಮ್ಮ ಈ ಪರಂಪರೆಯ ಜನ ಅದರಲ್ಲೂ ಹೆಣ್ಣುಮಕ್ಕಳು ವಿಶೇಷ ಸಾಧನೆಯನ್ನು ಮಾಡಬೇಕು ಈ ಸಾಧನೆ ಮಾಡಲು ಮೊದಲು ಸ್ತ್ರೀ ಸಮಾನತೆಯನ್ನು ಕೊಟ್ಟ ಈ ಸಮಾಜದ ಪುರುಷರು ಸಹಕಾರ ನೀಡುವುದರೊಡನೆ ತಾವೂ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಎಂ. ಚಂದ್ರಶೇಖರ್ ರವರು ಶರಣ ಸಾಹಿತ್ಯ ಪರಿಷತ್ತು ಲಿಂಗೈಕ್ಯ ಜಗದ್ಗುರು ರಾಜಗುರು ತಿಲಕ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಕನಸಿನ ಕೂಸು. ಅವರ ಆಶಯವನ್ನು ಅವರ ಕರ ಕಮಲ ಸಂಜಾತ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾಕಾರಗೊಳಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿದ್ಯವನ್ನು ಪಡುವಲು  ವಿರಕ್ತ ಮಠದ ಶ್ರೀಗಳಾದ ಮಹದೇವಸ್ವಾಮಿಗಳು ವಹಿಸಿದ್ದರು . ಕಾರ್ಯಕ್ರಮದಲ್ಲಿ ಸರಗೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ. ಗುರುಸ್ವಾಮಿರವರು ಮತ್ತು ತಿ.ನರಸೀಪುರ ತಾಲ್ಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ತೋಂಟೇಶ್ ರವರು ಹಾಜರಿದ್ದರು. ಕಾರ್ಯಕ್ರಮದ ನಂತರ ಮಹಾ ದಾಸೋಹ ನೆರವೇರಿತು.

andolanait

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

3 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

3 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

3 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

3 hours ago