ಜಿಲ್ಲೆಗಳು

ಕಾಯಕ ಮತ್ತು ದಾಸೋಹ ಸಮಾಜದ ಎರಡು ಕಣ್ಣುಗಳು – ದೇಚಿ

ಮೈಸೂರು : ನಗರದ ಪಡುವಲು ಶ್ರೀ ವಿರಕ್ತ ಮಠದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಿಡುಗಲು ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಸರಗೂರು  ಇವರ ವತಿಯಿಂದ ನಡೆದ  ದತ್ತಿ ಉಪನ್ಯಾಸ ಸಮಾರಂಭದಲ್ಲಿ ಪ್ರವಚನ ನೀಡಿದ ಸಾಹಿತಿ ದೇವರಾಜು ಪಿ. ಚಿಕ್ಕಹಳ್ಳಿ (ದೇಚಿ)ರವರು ಪರಿಶುದ್ಧ ಕಾಯಕದಿಂದ ಬಂದ ಹಣದಿಂದ ದಾಸೋಹವನ್ನು ನಡೆಸಬೇಕು, ಅದಕ್ಕಾಗಿಯೇ ೧೨ ನೇ ಶತಮಾನದ ಶರಣರು ಇಂದಿಗೂ ಜೀವಂತವಾಗಿದ್ದಾರೆ. ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ ಎಂದರು.

ಮುಂದುವರಿದು ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ. ಅನೇಕ ಶರಣರು ತಮ್ಮ ಹೆಸರುಗಳ ಹಿಂದೆ ತಮ್ಮ ತಮ್ಮ ಕಾಯಕದ ಹೆಸರನ್ನು ಬರೆದು ಕಾಯಕ ಸಮಾಜದ ಮಹತ್ವವನ್ನು ಸಾರಿದ್ದರು. ದಾಸೋಹವೆಂಬುದು ದಾನಕ್ಕಿಂತಲೂ ಶ್ರೇಷ್ಠ, ನಮ್ಮದು ದಾಸೋಹ ಪರಂಪರೆ, ದಾನವೆಂಬ ಪದಕ್ಕೆ ಜಾಗವಿರಕೂಡದು ಕಾರಣ ಈ ಜಗತ್ತಿನ ಏಕೈಕ ದಾನಿ ಮಹಾದೇವನೊಬ್ಬನೇ. ಹಾಗಾಗಿ ಕಾಯಕ ಮತ್ತು ದಾಸೋಹ ಎರಡೂ ಈ ಸಮಾಜದ ಕಣ್ಣುಗಳು ಎನ್ನುತ್ತಾ ಹಲವು ವಚನಗಳನ್ನು ನಿರ್ವಚನ ಮಾಡುತ್ತಾ ಶರಣ ಬಂಧುಗಳ ಮನ ಮುಟ್ಟಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹೆಳವರಹುಂಡಿ ಸಿದ್ದಪ್ಪನವರು ತಮ್ಮ ಭಾಷಣದಲ್ಲಿ ಶರಣ ಬಂಧುಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಸಾಧನೆ ಮಾಡಬೇಕು. ಸುಧೀರ್ಘ ಇತಿಹಾಸವನ್ನು ಹೊಂದಿರುವ ನಮ್ಮ ಈ ಪರಂಪರೆಯ ಜನ ಅದರಲ್ಲೂ ಹೆಣ್ಣುಮಕ್ಕಳು ವಿಶೇಷ ಸಾಧನೆಯನ್ನು ಮಾಡಬೇಕು ಈ ಸಾಧನೆ ಮಾಡಲು ಮೊದಲು ಸ್ತ್ರೀ ಸಮಾನತೆಯನ್ನು ಕೊಟ್ಟ ಈ ಸಮಾಜದ ಪುರುಷರು ಸಹಕಾರ ನೀಡುವುದರೊಡನೆ ತಾವೂ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಎಂ. ಚಂದ್ರಶೇಖರ್ ರವರು ಶರಣ ಸಾಹಿತ್ಯ ಪರಿಷತ್ತು ಲಿಂಗೈಕ್ಯ ಜಗದ್ಗುರು ರಾಜಗುರು ತಿಲಕ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಕನಸಿನ ಕೂಸು. ಅವರ ಆಶಯವನ್ನು ಅವರ ಕರ ಕಮಲ ಸಂಜಾತ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾಕಾರಗೊಳಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿದ್ಯವನ್ನು ಪಡುವಲು  ವಿರಕ್ತ ಮಠದ ಶ್ರೀಗಳಾದ ಮಹದೇವಸ್ವಾಮಿಗಳು ವಹಿಸಿದ್ದರು . ಕಾರ್ಯಕ್ರಮದಲ್ಲಿ ಸರಗೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ. ಗುರುಸ್ವಾಮಿರವರು ಮತ್ತು ತಿ.ನರಸೀಪುರ ತಾಲ್ಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ತೋಂಟೇಶ್ ರವರು ಹಾಜರಿದ್ದರು. ಕಾರ್ಯಕ್ರಮದ ನಂತರ ಮಹಾ ದಾಸೋಹ ನೆರವೇರಿತು.

andolanait

Recent Posts

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

16 mins ago

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

51 mins ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

56 mins ago

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…

1 hour ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…

1 hour ago

ಪ್ರಾಚ್ಯವಿದ್ಯಾ ಸಂಶೋಧನಾಲಯ ಉತ್ಕೃಷ್ಠ ಜ್ಞಾನ ಗ್ರಂಥಗಳನ್ನು ಪ್ರಕಟಿಸಲಿ : ಭಾರತೀ ಸ್ವಾಮೀಜಿ ಆಶಯ

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…

1 hour ago