ಜಿಲ್ಲೆಗಳು

ಕಾಯಕ ಮತ್ತು ದಾಸೋಹ ಸಮಾಜದ ಎರಡು ಕಣ್ಣುಗಳು – ದೇಚಿ

ಮೈಸೂರು : ನಗರದ ಪಡುವಲು ಶ್ರೀ ವಿರಕ್ತ ಮಠದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಿಡುಗಲು ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಸರಗೂರು  ಇವರ ವತಿಯಿಂದ ನಡೆದ  ದತ್ತಿ ಉಪನ್ಯಾಸ ಸಮಾರಂಭದಲ್ಲಿ ಪ್ರವಚನ ನೀಡಿದ ಸಾಹಿತಿ ದೇವರಾಜು ಪಿ. ಚಿಕ್ಕಹಳ್ಳಿ (ದೇಚಿ)ರವರು ಪರಿಶುದ್ಧ ಕಾಯಕದಿಂದ ಬಂದ ಹಣದಿಂದ ದಾಸೋಹವನ್ನು ನಡೆಸಬೇಕು, ಅದಕ್ಕಾಗಿಯೇ ೧೨ ನೇ ಶತಮಾನದ ಶರಣರು ಇಂದಿಗೂ ಜೀವಂತವಾಗಿದ್ದಾರೆ. ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ ಎಂದರು.

ಮುಂದುವರಿದು ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ. ಅನೇಕ ಶರಣರು ತಮ್ಮ ಹೆಸರುಗಳ ಹಿಂದೆ ತಮ್ಮ ತಮ್ಮ ಕಾಯಕದ ಹೆಸರನ್ನು ಬರೆದು ಕಾಯಕ ಸಮಾಜದ ಮಹತ್ವವನ್ನು ಸಾರಿದ್ದರು. ದಾಸೋಹವೆಂಬುದು ದಾನಕ್ಕಿಂತಲೂ ಶ್ರೇಷ್ಠ, ನಮ್ಮದು ದಾಸೋಹ ಪರಂಪರೆ, ದಾನವೆಂಬ ಪದಕ್ಕೆ ಜಾಗವಿರಕೂಡದು ಕಾರಣ ಈ ಜಗತ್ತಿನ ಏಕೈಕ ದಾನಿ ಮಹಾದೇವನೊಬ್ಬನೇ. ಹಾಗಾಗಿ ಕಾಯಕ ಮತ್ತು ದಾಸೋಹ ಎರಡೂ ಈ ಸಮಾಜದ ಕಣ್ಣುಗಳು ಎನ್ನುತ್ತಾ ಹಲವು ವಚನಗಳನ್ನು ನಿರ್ವಚನ ಮಾಡುತ್ತಾ ಶರಣ ಬಂಧುಗಳ ಮನ ಮುಟ್ಟಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹೆಳವರಹುಂಡಿ ಸಿದ್ದಪ್ಪನವರು ತಮ್ಮ ಭಾಷಣದಲ್ಲಿ ಶರಣ ಬಂಧುಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಸಾಧನೆ ಮಾಡಬೇಕು. ಸುಧೀರ್ಘ ಇತಿಹಾಸವನ್ನು ಹೊಂದಿರುವ ನಮ್ಮ ಈ ಪರಂಪರೆಯ ಜನ ಅದರಲ್ಲೂ ಹೆಣ್ಣುಮಕ್ಕಳು ವಿಶೇಷ ಸಾಧನೆಯನ್ನು ಮಾಡಬೇಕು ಈ ಸಾಧನೆ ಮಾಡಲು ಮೊದಲು ಸ್ತ್ರೀ ಸಮಾನತೆಯನ್ನು ಕೊಟ್ಟ ಈ ಸಮಾಜದ ಪುರುಷರು ಸಹಕಾರ ನೀಡುವುದರೊಡನೆ ತಾವೂ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಎಂ. ಚಂದ್ರಶೇಖರ್ ರವರು ಶರಣ ಸಾಹಿತ್ಯ ಪರಿಷತ್ತು ಲಿಂಗೈಕ್ಯ ಜಗದ್ಗುರು ರಾಜಗುರು ತಿಲಕ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಕನಸಿನ ಕೂಸು. ಅವರ ಆಶಯವನ್ನು ಅವರ ಕರ ಕಮಲ ಸಂಜಾತ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾಕಾರಗೊಳಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿದ್ಯವನ್ನು ಪಡುವಲು  ವಿರಕ್ತ ಮಠದ ಶ್ರೀಗಳಾದ ಮಹದೇವಸ್ವಾಮಿಗಳು ವಹಿಸಿದ್ದರು . ಕಾರ್ಯಕ್ರಮದಲ್ಲಿ ಸರಗೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ. ಗುರುಸ್ವಾಮಿರವರು ಮತ್ತು ತಿ.ನರಸೀಪುರ ತಾಲ್ಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ತೋಂಟೇಶ್ ರವರು ಹಾಜರಿದ್ದರು. ಕಾರ್ಯಕ್ರಮದ ನಂತರ ಮಹಾ ದಾಸೋಹ ನೆರವೇರಿತು.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

6 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

11 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

11 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

11 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

16 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

16 hours ago