ಜಿಲ್ಲೆಗಳು

ಕಾಯಕ ಮತ್ತು ದಾಸೋಹ ಸಮಾಜದ ಎರಡು ಕಣ್ಣುಗಳು – ದೇಚಿ

ಮೈಸೂರು : ನಗರದ ಪಡುವಲು ಶ್ರೀ ವಿರಕ್ತ ಮಠದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಿಡುಗಲು ಹಾಗೂ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಸರಗೂರು  ಇವರ ವತಿಯಿಂದ ನಡೆದ  ದತ್ತಿ ಉಪನ್ಯಾಸ ಸಮಾರಂಭದಲ್ಲಿ ಪ್ರವಚನ ನೀಡಿದ ಸಾಹಿತಿ ದೇವರಾಜು ಪಿ. ಚಿಕ್ಕಹಳ್ಳಿ (ದೇಚಿ)ರವರು ಪರಿಶುದ್ಧ ಕಾಯಕದಿಂದ ಬಂದ ಹಣದಿಂದ ದಾಸೋಹವನ್ನು ನಡೆಸಬೇಕು, ಅದಕ್ಕಾಗಿಯೇ ೧೨ ನೇ ಶತಮಾನದ ಶರಣರು ಇಂದಿಗೂ ಜೀವಂತವಾಗಿದ್ದಾರೆ. ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ ಎಂದರು.

ಮುಂದುವರಿದು ಕಾಯಕ ತತ್ವದ ಆಧಾರದ ಮೇಲೆ ನಿರ್ಮಾಣವಾದ ಶರಣ ಧರ್ಮ ದಾಸೋಹವೆಂಬ ಕರ್ತವ್ಯವನ್ನೂ ಬೋಧಿಸುತ್ತದೆ. ಅನೇಕ ಶರಣರು ತಮ್ಮ ಹೆಸರುಗಳ ಹಿಂದೆ ತಮ್ಮ ತಮ್ಮ ಕಾಯಕದ ಹೆಸರನ್ನು ಬರೆದು ಕಾಯಕ ಸಮಾಜದ ಮಹತ್ವವನ್ನು ಸಾರಿದ್ದರು. ದಾಸೋಹವೆಂಬುದು ದಾನಕ್ಕಿಂತಲೂ ಶ್ರೇಷ್ಠ, ನಮ್ಮದು ದಾಸೋಹ ಪರಂಪರೆ, ದಾನವೆಂಬ ಪದಕ್ಕೆ ಜಾಗವಿರಕೂಡದು ಕಾರಣ ಈ ಜಗತ್ತಿನ ಏಕೈಕ ದಾನಿ ಮಹಾದೇವನೊಬ್ಬನೇ. ಹಾಗಾಗಿ ಕಾಯಕ ಮತ್ತು ದಾಸೋಹ ಎರಡೂ ಈ ಸಮಾಜದ ಕಣ್ಣುಗಳು ಎನ್ನುತ್ತಾ ಹಲವು ವಚನಗಳನ್ನು ನಿರ್ವಚನ ಮಾಡುತ್ತಾ ಶರಣ ಬಂಧುಗಳ ಮನ ಮುಟ್ಟಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಹೆಳವರಹುಂಡಿ ಸಿದ್ದಪ್ಪನವರು ತಮ್ಮ ಭಾಷಣದಲ್ಲಿ ಶರಣ ಬಂಧುಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಸಾಧನೆ ಮಾಡಬೇಕು. ಸುಧೀರ್ಘ ಇತಿಹಾಸವನ್ನು ಹೊಂದಿರುವ ನಮ್ಮ ಈ ಪರಂಪರೆಯ ಜನ ಅದರಲ್ಲೂ ಹೆಣ್ಣುಮಕ್ಕಳು ವಿಶೇಷ ಸಾಧನೆಯನ್ನು ಮಾಡಬೇಕು ಈ ಸಾಧನೆ ಮಾಡಲು ಮೊದಲು ಸ್ತ್ರೀ ಸಮಾನತೆಯನ್ನು ಕೊಟ್ಟ ಈ ಸಮಾಜದ ಪುರುಷರು ಸಹಕಾರ ನೀಡುವುದರೊಡನೆ ತಾವೂ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಎಂ. ಚಂದ್ರಶೇಖರ್ ರವರು ಶರಣ ಸಾಹಿತ್ಯ ಪರಿಷತ್ತು ಲಿಂಗೈಕ್ಯ ಜಗದ್ಗುರು ರಾಜಗುರು ತಿಲಕ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಕನಸಿನ ಕೂಸು. ಅವರ ಆಶಯವನ್ನು ಅವರ ಕರ ಕಮಲ ಸಂಜಾತ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾಕಾರಗೊಳಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿದ್ಯವನ್ನು ಪಡುವಲು  ವಿರಕ್ತ ಮಠದ ಶ್ರೀಗಳಾದ ಮಹದೇವಸ್ವಾಮಿಗಳು ವಹಿಸಿದ್ದರು . ಕಾರ್ಯಕ್ರಮದಲ್ಲಿ ಸರಗೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ. ಗುರುಸ್ವಾಮಿರವರು ಮತ್ತು ತಿ.ನರಸೀಪುರ ತಾಲ್ಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ತೋಂಟೇಶ್ ರವರು ಹಾಜರಿದ್ದರು. ಕಾರ್ಯಕ್ರಮದ ನಂತರ ಮಹಾ ದಾಸೋಹ ನೆರವೇರಿತು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago