ಮೈಸೂರು: ಕಬಾಬ್ ಮಾರಾಟ ಮಾಡುವವನ ಹತ್ಯೆ ಸಂಬಂಧ ಎನ್.ಆರ್ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.
ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಬಂಧಿಸಿರುವುದು. ಮಂಗಳವಾರ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬವರನ್ನು ಬಂಧಿಸಲಾಗಿತ್ತು.
‘ಹುಡುಗಿಯರನ್ನು ಚುಡಾಯಿಸಬೇಡಿ’ ಎಂದು ಬುದ್ಧಿವಾದ ಹೇಳಿದ ಕಬಾಬ್ ಮಾರಿ ಜೀವನ ನಡೆಸುತ್ತಿದ್ದ ಕಲ್ಯಾಣಗಿರಿ ನಿವಾಸಿ ಸಯ್ಯದ್ ಮನ್ಸೂರ್(32) ಎಂಬವನ ಅಪಹರಣಕ್ಕೆ ಸಂಬಂಧಪಟ್ಟಂತೆ ಭಾನುವಾರ ರಾತ್ರಿ ಎನ್.ಆರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಪಹರಣಗೊಂಡ ಸ್ಥಳವನ್ನು ಮತ್ತು ಸುತ್ತಲು ಇರುವ ಸಿಸಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಮನ್ಸೂರ್ನನ್ನು ಕೊಲೆ ಮಾಡಿರಬಹುದು ಎಂಬ ಸಂಶಯ ಮೂಡಿತ್ತು. ಕಾರ್ಯಾಚರಣೆ ಕೈಗೊಂಡ ಪೊಲೀಸರು ಮಂಗಳವಾರ ಬೆಳಿಗ್ಗೆ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬಾತನನ್ನು ಬಂಧಿಸಿದ್ದರು. ಆ ನಂತರ ಸಂಜೆ ಪಾಂಡವಪುರದ ದರಸನಕುಪ್ಪೆ ಬಳಿಯ ನಾಲೆಯಲ್ಲಿ ಸಯ್ಯದ್ ಮನ್ಸೂರ್ ದೇಹ ಪತ್ತೆಯಾಗಿತ್ತು. ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳಾದ ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಎಂಬವರನ್ನು ಬುಧವಾರ ಬಂಧಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…