ಮೈಸೂರು: ಕಬಾಬ್ ಮಾರಾಟ ಮಾಡುವವನ ಹತ್ಯೆ ಸಂಬಂಧ ಎನ್.ಆರ್ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.
ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಬಂಧಿಸಿರುವುದು. ಮಂಗಳವಾರ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬವರನ್ನು ಬಂಧಿಸಲಾಗಿತ್ತು.
‘ಹುಡುಗಿಯರನ್ನು ಚುಡಾಯಿಸಬೇಡಿ’ ಎಂದು ಬುದ್ಧಿವಾದ ಹೇಳಿದ ಕಬಾಬ್ ಮಾರಿ ಜೀವನ ನಡೆಸುತ್ತಿದ್ದ ಕಲ್ಯಾಣಗಿರಿ ನಿವಾಸಿ ಸಯ್ಯದ್ ಮನ್ಸೂರ್(32) ಎಂಬವನ ಅಪಹರಣಕ್ಕೆ ಸಂಬಂಧಪಟ್ಟಂತೆ ಭಾನುವಾರ ರಾತ್ರಿ ಎನ್.ಆರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಪಹರಣಗೊಂಡ ಸ್ಥಳವನ್ನು ಮತ್ತು ಸುತ್ತಲು ಇರುವ ಸಿಸಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಮನ್ಸೂರ್ನನ್ನು ಕೊಲೆ ಮಾಡಿರಬಹುದು ಎಂಬ ಸಂಶಯ ಮೂಡಿತ್ತು. ಕಾರ್ಯಾಚರಣೆ ಕೈಗೊಂಡ ಪೊಲೀಸರು ಮಂಗಳವಾರ ಬೆಳಿಗ್ಗೆ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬಾತನನ್ನು ಬಂಧಿಸಿದ್ದರು. ಆ ನಂತರ ಸಂಜೆ ಪಾಂಡವಪುರದ ದರಸನಕುಪ್ಪೆ ಬಳಿಯ ನಾಲೆಯಲ್ಲಿ ಸಯ್ಯದ್ ಮನ್ಸೂರ್ ದೇಹ ಪತ್ತೆಯಾಗಿತ್ತು. ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳಾದ ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಎಂಬವರನ್ನು ಬುಧವಾರ ಬಂಧಿಸಿದ್ದಾರೆ.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…