ಜಿಲ್ಲೆಗಳು

ಕಬಾಬ್ ಮಾರುವನ ಕೊಲೆ: ಮತ್ತಿಬ್ಬರ ಬಂಧನ

ಮೈಸೂರು: ಕಬಾಬ್ ಮಾರಾಟ ಮಾಡುವವನ ಹತ್ಯೆ ಸಂಬಂಧ ಎನ್.ಆರ್ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.
ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಬಂಧಿಸಿರುವುದು. ಮಂಗಳವಾರ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬವರನ್ನು ಬಂಧಿಸಲಾಗಿತ್ತು.
‘ಹುಡುಗಿಯರನ್ನು ಚುಡಾಯಿಸಬೇಡಿ’ ಎಂದು ಬುದ್ಧಿವಾದ ಹೇಳಿದ ಕಬಾಬ್ ಮಾರಿ ಜೀವನ ನಡೆಸುತ್ತಿದ್ದ ಕಲ್ಯಾಣಗಿರಿ ನಿವಾಸಿ ಸಯ್ಯದ್‌ ಮನ್ಸೂರ್(32) ಎಂಬವನ ಅಪಹರಣಕ್ಕೆ ಸಂಬಂಧಪಟ್ಟಂತೆ ಭಾನುವಾರ ರಾತ್ರಿ ಎನ್.ಆರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಪಹರಣಗೊಂಡ ಸ್ಥಳವನ್ನು ಮತ್ತು ಸುತ್ತಲು ಇರುವ ಸಿಸಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಮನ್ಸೂರ್‌ನನ್ನು ಕೊಲೆ ಮಾಡಿರಬಹುದು ಎಂಬ ಸಂಶಯ ಮೂಡಿತ್ತು. ಕಾರ್ಯಾಚರಣೆ ಕೈಗೊಂಡ ಪೊಲೀಸರು ಮಂಗಳವಾರ ಬೆಳಿಗ್ಗೆ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬಾತನನ್ನು ಬಂಧಿಸಿದ್ದರು. ಆ ನಂತರ ಸಂಜೆ ಪಾಂಡವಪುರದ ದರಸನಕುಪ್ಪೆ ಬಳಿಯ ನಾಲೆಯಲ್ಲಿ ಸಯ್ಯದ್‌ ಮನ್ಸೂರ್ ದೇಹ ಪತ್ತೆಯಾಗಿತ್ತು. ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳಾದ ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಎಂಬವರನ್ನು ಬುಧವಾರ ಬಂಧಿಸಿದ್ದಾರೆ.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago