ಜಿಲ್ಲೆಗಳು

ಹನುಮ ಧ್ವಜ ತೆರವು ವಿವಾದ: ಕೆರಗೋಡು ಗ್ರಾಪಂ ನಡಾವಳಿ ಪುಸ್ತಕ ನಾಪತ್ತೆ!

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲಗಳು ಹೆಚ್ಚಾಗುತ್ತಿವೆ. ಹಿಂದೂಪರ ಕಾರ್ಯಕರ್ತರು ಕೇವಲ ಧ್ವಜ ಸ್ತಂಭ ನೆಡಲು ಅನುಮತಿ ಪಡೆಯಲಾಗಿತ್ತು, ರಾಷ್ಟ್ರ ಅಥವಾ ರಾಜ್ಯ ಧ್ವಜವನ್ನು ಹಾರಿಸುತ್ತೇವೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿ ಅನುಮತಿ ಪಡೆದುಕೊಂಡಿಲ್ಲ ಎಂದು ವಾದಿಸಿದರೆ, ಕಾಂಗ್ರೆಸ್‌ ಶಾಸಕ ಹಾಗೂ ಗ್ರಾಪಂ ಪಿಡಿಒ ನಿರ್ದಿಷ್ಟವಾಗಿ ರಾಷ್ಟ್ರ ಅಥವಾ ರಾಜ್ಯ ಧ್ವಜವನ್ನು ಆರಿಸುವ ಸಲುವಾಗಿ ಅನುಮತಿಯನ್ನು ನೀಡಲಾಗಿತ್ತೇ ಹೊರತು ಧಾರ್ಮಿಕ ಧ್ವಜವನ್ನು ಹಾರಿಸುವಂತಿಲ್ಲ ಎಂದು ಮುಚ್ಚಳಿಕೆಯಲ್ಲಿ ತಿಳಿಸಲಾಗಿತ್ತು ಎಂದು ವಾದಿಸಿತ್ತು.

ಈ ಎರಡರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂಬ ಚರ್ಚೆ ಹಾಗೂ ವಾದ ವಿವಾದಗಳು ನಡೆಯುತ್ತಿರುವಾಗಲೇ ಇದೀಗ ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಲಾಗಿದ್ದ ನಡಾವಳಿ ಪುಸ್ತಕ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಜನವರಿ 25ರಂದು ಸಭೆ ನಡೆಸಿ ನಡಾವಳಿ ಬರೆಯಲಾಗಿತ್ತು.

ಸದ್ಯ ಈ ನಡಾವಳಿ ಪುಸ್ತಕ ನಾಪತ್ತೆಯಾಗಿರುವುದರ ಕುರಿತು ಗ್ರಾಮ ಪಂಚಾಯಿತಿ ಸದಸ್ಯರು ಪ್ರಶ್ನಿಸುತ್ತಿದ್ದು ಕಾರ್ಯದರ್ಶಿ ರತ್ನಮ್ಮ ಎಂಬುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅತ್ತ ರತ್ನಮ್ಮ ನಡಾವಳಿ ಪುಸ್ತಕವನ್ನು ನಮ್ಮ ಸುಪರ್ದಿಗೆ ಕೊಟ್ಟಿಲ್ಲ ಎಂದು ರತ್ನಮ್ಮ ಹೇಳುತ್ತಿದ್ದು, ಪುಸ್ತಕ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

 

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

31 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

36 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

46 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago