ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲಗಳು ಹೆಚ್ಚಾಗುತ್ತಿವೆ. ಹಿಂದೂಪರ ಕಾರ್ಯಕರ್ತರು ಕೇವಲ ಧ್ವಜ ಸ್ತಂಭ ನೆಡಲು ಅನುಮತಿ ಪಡೆಯಲಾಗಿತ್ತು, ರಾಷ್ಟ್ರ ಅಥವಾ ರಾಜ್ಯ ಧ್ವಜವನ್ನು ಹಾರಿಸುತ್ತೇವೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿ ಅನುಮತಿ ಪಡೆದುಕೊಂಡಿಲ್ಲ ಎಂದು ವಾದಿಸಿದರೆ, ಕಾಂಗ್ರೆಸ್ ಶಾಸಕ ಹಾಗೂ ಗ್ರಾಪಂ ಪಿಡಿಒ ನಿರ್ದಿಷ್ಟವಾಗಿ ರಾಷ್ಟ್ರ ಅಥವಾ ರಾಜ್ಯ ಧ್ವಜವನ್ನು ಆರಿಸುವ ಸಲುವಾಗಿ ಅನುಮತಿಯನ್ನು ನೀಡಲಾಗಿತ್ತೇ ಹೊರತು ಧಾರ್ಮಿಕ ಧ್ವಜವನ್ನು ಹಾರಿಸುವಂತಿಲ್ಲ ಎಂದು ಮುಚ್ಚಳಿಕೆಯಲ್ಲಿ ತಿಳಿಸಲಾಗಿತ್ತು ಎಂದು ವಾದಿಸಿತ್ತು.
ಈ ಎರಡರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂಬ ಚರ್ಚೆ ಹಾಗೂ ವಾದ ವಿವಾದಗಳು ನಡೆಯುತ್ತಿರುವಾಗಲೇ ಇದೀಗ ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಲಾಗಿದ್ದ ನಡಾವಳಿ ಪುಸ್ತಕ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಜನವರಿ 25ರಂದು ಸಭೆ ನಡೆಸಿ ನಡಾವಳಿ ಬರೆಯಲಾಗಿತ್ತು.
ಸದ್ಯ ಈ ನಡಾವಳಿ ಪುಸ್ತಕ ನಾಪತ್ತೆಯಾಗಿರುವುದರ ಕುರಿತು ಗ್ರಾಮ ಪಂಚಾಯಿತಿ ಸದಸ್ಯರು ಪ್ರಶ್ನಿಸುತ್ತಿದ್ದು ಕಾರ್ಯದರ್ಶಿ ರತ್ನಮ್ಮ ಎಂಬುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅತ್ತ ರತ್ನಮ್ಮ ನಡಾವಳಿ ಪುಸ್ತಕವನ್ನು ನಮ್ಮ ಸುಪರ್ದಿಗೆ ಕೊಟ್ಟಿಲ್ಲ ಎಂದು ರತ್ನಮ್ಮ ಹೇಳುತ್ತಿದ್ದು, ಪುಸ್ತಕ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…