ಜಿಲ್ಲೆಗಳು

ಫೆಬ್ರವರಿ 7ರಂದು ಮಂಡ್ಯ ಬಂದ್‌ಗೆ ಕರೆ ನೀಡಿದ ಸಮಾನ ಮನಸ್ಕರ ವೇದಿಕೆ

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ತೆರವು ಮಾಡಿ ರಾಷ್ಟ್ರಧ್ವಜವನ್ನು ಹಾರಿಸಿದ ವಿಷಯ ಸದ್ಯ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ವಾದ ವಿವಾದಗಳಿಗೆ ಮಾಡಿಕೊಟ್ಟಿದೆ. ಒಂದೆಡೆ ಕಾಂಗ್ರೆಸ್‌ ನಾವು ತಿರಂಗ ಯಾತ್ರೆ ಮಾಡಲಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದರೆ, ಮತ್ತೊಂದೆಡೆ ಬಿಜೆಪಿ ಕೇಸರಿ ಧ್ವಜ ಯಾತ್ರೆ ಮಾಡುತ್ತೇವೆ ಎಂದು ಹೇಳಿಕೊಂಡಿದೆ.

ಇದೆಲ್ಲದ್ದರ ನಡುವೆ ಇದೀಗ ಸಮಾನ ಮನಸ್ಕರ ವೇದಿಕೆ ಫೆಬ್ರವರಿ 7ರಂದು ಮಂಡ್ಯ ಬಂದ್‌ ಮಾಡಲು ಕರೆ ನೀಡಿದೆ. ಮಂಡ್ಯದಲ್ಲಿ ಸೌಹಾರ್ಹ ಮತ್ತು ಶಾಂತಿ ಕದಡುತ್ತಿರುವ ಶಕ್ತಿಗಳ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತು ಸುದ್ದಿಗೋಷ್ಟಿ ನಡೆದಿದ್ದು, ಸಮಾನ ಮನಸ್ಕರ ವೇದಿಕೆ ಸಂಚಾಲಕ ಲಕ್ಷ್ಮಣ್‌ ಚೀರನಹಳ್ಳಿ ಮಾತನಾಡಿ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜದ ವಿಷಯ ಇಟ್ಟುಕೊಂಡು ಶಾಂತಿ ಕದಡುತ್ತಿದ್ದಾರೆ. ರಸ್ತೆಗಳಲ್ಲಿ ಕಲ್ಲು ತೂರಾಟ ಮಾಡಿ ಪುಂಡಾಟಿಕೆ ಮಾಡುತ್ತಿದ್ದಾರೆ. ಶಾಂತಿ ಹಾಗೂ ಸೌಹಾರ್ದತೆ ಕದಡುತ್ತಿರುವವರನ್ನು ನಾವು ಖಂಡಿಸುತ್ತೇವೆ. ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತ ಪ್ರತಿಭಟನೆ ನಡೆಸಲು ಅವಕಾಶ ಕೊಟ್ಟಿದ್ದು ತಪ್ಪು ಎಂದು ಹೇಳಿದರು.

ಬರಪೀಡಿತ ಹಾಗೂ ನಿರುದ್ಯೋಗದ ಬಗ್ಗೆ ಚರ್ಚೆಯಾಗಬೇಕು. ವಿರೋಧ ಪಕ್ಷಗಳು ಮಂಗಳೂರಿನ ರೀತಿ ಮಂಡ್ಯದಲ್ಲಿ ಶಾಂತಿ ಕದಡುತ್ತಿದ್ದಾರೆ. ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾಕಿದ್ದಾರೆ. ರೈತರು ಅಂಬೇಡ್ಕರ್‌, ಮುಸ್ಲಿಂ, ಕನ್ನಡ ಧ್ವಜ ಹಾಕುತ್ತೇವೆ ಎಂದರೆ ಅಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ. ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ಧ ಧ್ವಜ ಇಟ್ಟುಕೊಂಡು ಹೋಗುತ್ತಿರುವುದು ಸರಿಯಲ್ಲ. ಇದು ಜನ ವಿರೋಧಿ ರಾಜಕೀಯ. ಪ್ರತಿಭಟನೆಗಳ ಹೆಸರಿನಲ್ಲಿ ಗೂಂಡಾಗಿರಿ ಮಾಡುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ತಲೆ ದೋರುತ್ತಿದೆ. ಸಿಟಿ ರವಿ ರಾಷ್ಟ್ರ ಧ್ವಜವನ್ನು ತಾಲಿಬಾನ್‌ಗೆ ಹೋಲಿಕೆ ಮಾಡಿದ್ದಾರೆ. ಕೋಮುವಾದಕ್ಕೆ ವಿರೋಧ ವ್ಯಕ್ತಪಡಿಸಬೇಕು ಎಂದು ಲಕ್ಷ್ಮಣ್‌ ಚೀರನಹಳ್ಳಿ ತಿಳಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು ಫೆಬ್ರವರಿ 9ರಂದು ಬಿಜೆಪಿ – ಜೆಡಿಎಸ್‌ ಬಂದ್‌ಗೆ ಕರೆ ಕೊಟ್ಟಿದ್ದಾರೆ. ಇದು ಒಳ್ಳೆಯದಲ್ಲ. ಇದನ್ನು ನಿಲ್ಲಿಸಲು ಫೆಬ್ರವರಿ 7ರಂದು ಮಂಡ್ಯ ಬಂದ್‌ಗೆ ಕರೆ ಕೊಟ್ಟಿದ್ದೇವೆ. ಅನುಮತಿ ಇಲ್ಲದೇ ಹನುಮ ಧ್ವಜ ಹಾಕಿರುವುದು ತಪ್ಪು. ಶಾಂತಿ ಕದಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಮಂಡ್ಯ ಜಿಲ್ಲೆ ಮಂಗಳೂರು ಆಗಬಾರದು ಎಂಬ ಕಾರಣಕ್ಕೆ ಪುಂಡಾಟಿಕೆ ನಿಲ್ಲಿಸಲು ಬಂದ್‌ ಮಾಡುತ್ತಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿಕೆ ನೀಡಿದರು.

andolana

Recent Posts

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

25 mins ago

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

54 mins ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

1 hour ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

4 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

4 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

4 hours ago