ಜಿಲ್ಲೆಗಳು

ಕೆಸರು ಗದ್ದೆಯಂತಾದ ಶಾಲೆ ಎದುರಿನ ರಸ್ತೆ, ಮತ್ತೊಂದೆಡೆ ಸೊಳ್ಳೆಗಳ ಕಾಟ : ಕ್ರಮಕ್ಕೆ ಒತ್ತಾಯ

ಮೈಸೂರು : ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ.
ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ ಸೇರಬೇಕಾದ ದುಸ್ಥಿತಿ ಬಂದಿದೆ.
ಒಂದು ತಿಂಗಳ ಹಿಂದೆ ಒಳಚರಂಡಿ ಕಾಮಗಾರಿಗಾಗಿ ಅಗೆಗಿದ್ದ ಮಣ್ಣನ್ನು ಡಾಂಬರು ರಸ್ತೆಯಲ್ಲಿಯೇ ಹಾಕಿದ್ದರಿಂದ ಕೆಸರು ಗದ್ದೆಯಂತಾಗಿ ಪೋಷಕರು ಮಕ್ಕಳನ್ನು ಬಿಡುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ.
ಸೊಳ್ಳೆಗಳ ಕಾಟ: ಶಾಲೆಯ ಪಕ್ಕದಲ್ಲೇ ಚರಂಡಿ ಹಾದುಹೋಗಿದ್ದು, ಮಣ್ಣು, ತ್ಯಾಜ್ಯ ಚರಂಡಿಯಲ್ಲಿ ಶೇಖರಣೆಯಾಗಿ ನೀರು ಸರಾಗವಾಗಿ ಹರಿಯದೆ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದ್ದು, ಇದರಿಂದ ಸಾಂಕ್ರಮಿಕ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಸೊಳ್ಳೆಗಳ ಕಾಟದಿಂದ ಸಣ್ಣ ಮಕ್ಕಳು ಶಾಲೆಯಲ್ಲಿ ಕುಳಿತು ಪಾಠ ಕೇಳಲು ಕಿರಿಕಿರಿ ಅನುಭವಿಸುವಂತಾಗಿದೆ.
ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

andolanait

Recent Posts

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

49 mins ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

1 hour ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

1 hour ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 hours ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

2 hours ago