ಮೈಸೂರು : ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ.
ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ ಸೇರಬೇಕಾದ ದುಸ್ಥಿತಿ ಬಂದಿದೆ.
ಸೊಳ್ಳೆಗಳ ಕಾಟ: ಶಾಲೆಯ ಪಕ್ಕದಲ್ಲೇ ಚರಂಡಿ ಹಾದುಹೋಗಿದ್ದು, ಮಣ್ಣು, ತ್ಯಾಜ್ಯ ಚರಂಡಿಯಲ್ಲಿ ಶೇಖರಣೆಯಾಗಿ ನೀರು ಸರಾಗವಾಗಿ ಹರಿಯದೆ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದ್ದು, ಇದರಿಂದ ಸಾಂಕ್ರಮಿಕ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಸೊಳ್ಳೆಗಳ ಕಾಟದಿಂದ ಸಣ್ಣ ಮಕ್ಕಳು ಶಾಲೆಯಲ್ಲಿ ಕುಳಿತು ಪಾಠ ಕೇಳಲು ಕಿರಿಕಿರಿ ಅನುಭವಿಸುವಂತಾಗಿದೆ.
ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…