ಮೈಸೂರು : ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ.
ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ ಸೇರಬೇಕಾದ ದುಸ್ಥಿತಿ ಬಂದಿದೆ.
ಸೊಳ್ಳೆಗಳ ಕಾಟ: ಶಾಲೆಯ ಪಕ್ಕದಲ್ಲೇ ಚರಂಡಿ ಹಾದುಹೋಗಿದ್ದು, ಮಣ್ಣು, ತ್ಯಾಜ್ಯ ಚರಂಡಿಯಲ್ಲಿ ಶೇಖರಣೆಯಾಗಿ ನೀರು ಸರಾಗವಾಗಿ ಹರಿಯದೆ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದ್ದು, ಇದರಿಂದ ಸಾಂಕ್ರಮಿಕ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಸೊಳ್ಳೆಗಳ ಕಾಟದಿಂದ ಸಣ್ಣ ಮಕ್ಕಳು ಶಾಲೆಯಲ್ಲಿ ಕುಳಿತು ಪಾಠ ಕೇಳಲು ಕಿರಿಕಿರಿ ಅನುಭವಿಸುವಂತಾಗಿದೆ.
ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…