ಮೈಸೂರು : ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್ ನಲ್ಲಿರುವ ಯುರೋ ಶಾಲೆ ಎದುರು ರಸ್ತೆ ಕೆಸರುಗದ್ದೆಯಂತಾಗಿದ್ದು ಶಾಲೆಯ ಮಕ್ಕಳು ಓಡಾಡಲು ತುಂಬಾ ಕಷ್ಟಪಡುತ್ತಿದ್ದಾರೆ.
ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಪುಟಾಣಿ ಮಕ್ಕಳು ಕೆಸರಿನಲ್ಲಿಯೇ ಶಾಲೆ ಸೇರಬೇಕಾದ ದುಸ್ಥಿತಿ ಬಂದಿದೆ.
ಸೊಳ್ಳೆಗಳ ಕಾಟ: ಶಾಲೆಯ ಪಕ್ಕದಲ್ಲೇ ಚರಂಡಿ ಹಾದುಹೋಗಿದ್ದು, ಮಣ್ಣು, ತ್ಯಾಜ್ಯ ಚರಂಡಿಯಲ್ಲಿ ಶೇಖರಣೆಯಾಗಿ ನೀರು ಸರಾಗವಾಗಿ ಹರಿಯದೆ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದ್ದು, ಇದರಿಂದ ಸಾಂಕ್ರಮಿಕ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಸೊಳ್ಳೆಗಳ ಕಾಟದಿಂದ ಸಣ್ಣ ಮಕ್ಕಳು ಶಾಲೆಯಲ್ಲಿ ಕುಳಿತು ಪಾಠ ಕೇಳಲು ಕಿರಿಕಿರಿ ಅನುಭವಿಸುವಂತಾಗಿದೆ.
ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…