Mysore
25
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಖಾಸಗಿ ದರ್ಬಾರ್ ನಡೆಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್​ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.

ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್​​ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು. ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!