ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.
ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು. ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…
ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…