ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.
ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು. ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…