ಜಿಲ್ಲೆಗಳು

ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಖಾಸಗಿ ದರ್ಬಾರ್ ನಡೆಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು.
ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನ ಇಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್​ನಲ್ಲಿ ಇರುವ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿ ಖಾಸಗಿ ದರ್ಬಾರ್ ನಡೆಸಿದರು.

ಬೆಳಗ್ಗೆ ಶುಭ ಮುಹೂರ್ತದಲ್ಲಿ ಅರಮನೆಯಲ್ಲಿ ಹೋಮ ಹವನಗಳನ್ನು ನಡೆಸಿದ ಯದುವೀರ್ ನವರರಾತ್ರಿಯ ಕಂಕಣ ಧಾರಣೆ ಮಾಡಿ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್​​ನ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿರು. ಬಳಿಕ 12.15 ರಿಂದ 12.25 ವರೆಗಿನ ಶುಭ ಗಳಿಗೆಯಲ್ಲಿ ರತ್ನಖಚಿತ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಿದರು. ನಂತರ 33 ದೇವಾಲಯಗಳಿಂದ ಬಂದ ಪ್ರಸಾದ ಹಾಗೂ ತೀರ್ಥ ಸೇವನೆ ಮಾಡಿದರು. ಬಳಿಕ ಅರಮನೆ ಆನೆಗಳು, ಕುದುರೆ, ಹಸು, ಒಂಟೆಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.

andolanait

Recent Posts

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

20 mins ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

54 mins ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

4 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

4 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

4 hours ago