ಜಿಲ್ಲೆಗಳು

ಖಾಸಗಿ ದರ್ಬಾರಿಗೆ ಅಂಬಾವಿಲಾಸ ಅರಮನೆ ಸಜ್ಜು

ನವರಾತ್ರಿ ಪ್ರಯುಕ್ತ ಅರಮನೆಯಲ್ಲಿ ಹಲವು ಧಾರ್ಮಿಕ ಕಾರ್ಯ;
ಯದುವೀರ್‌ಗೆ ೮ನೇ ವರ್ಷದ ದರ್ಬಾರ್ ಸಂಭ್ರಮ

ಕೆ.ಬಿ.ರಮೇಶನಾಯಕ

ಮೈಸೂರು: ಯದುವಂಶದವರು ಅರಮನೆಯಲ್ಲಿ ಶರನ್ನವರಾತ್ರಿಯ ವೇಳೆ ನಡೆಸಿಕೊಂಡು ಬಂದಿರುವ ಖಾಸಗಿ ದರ್ಬಾರ್‌ಗೆ ಅರಮನೆ ಸಜ್ಜಾಗಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಇದು ಎಂಟನೇ ವರ್ಷದ ದರ್ಬಾರ್ ಆಗಿದೆ.
ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು ೧೦ ದಿನಗಳ ಕಾಲ ನಡೆಯಲಿವೆ. ನವರಾತ್ರಿ ಮೊದಲ ದಿನವಾದ ಸೆ.೨೫ರಂದು ಸೋಮವಾರ ಮುಂಜಾನೆ ೫.೧೦ರಿಂದ ೫.೩೦ರೊಳಗೆ ದರ್ಬಾರ್ ಹಾಲ್‌ನಲ್ಲಿ ಜೋಡಿಸಲಾಗಿರುವ ಸಿಂಹಾಸನಕ್ಕೆ ‘ಸಿಂಹ’ ಜೋಡಣಾ ಕಾರ್ಯ ನಡೆಯಲಿದೆ. ಬೆಳಿಗ್ಗೆ ೮.೦೫ರಿಂದ ೮.೫೫ರವರೆಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚಾಮುಂಡಿತೊಟ್ಟಿಯಲ್ಲಿ ಕಂಕಣ ಧಾರಣೆ ಮಾಡಲಾಗುತ್ತದೆ. ಬಳಿಕ ಚಾಮುಂಡಿತೊಟ್ಟಿಯಿಂದ ವಾಣಿವಿಲಾಸ ದೇವರ ಮನೆಗೆ ಕಂಕಣವನ್ನು ತಂದು ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. ೯.೩೦ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಸವಾರಿ ತೊಟ್ಟಿಗೆ ಆಗಮಿಸಲಿದೆ. ೯.೫೦ರಿಂದ ೧೦.೩೫ರೊಳಗೆ ಕಳಸ ಪೂಜೆ ಹಾಗೂ ಸಿಂಹಾರೋಹಣ ನೆರವೇರಲಿದೆ. ಬಳಿಕ ಖಾಸಗಿ ದರ್ಬಾರ್ ಜರುಗಲಿದೆ. ದರ್ಬಾರ್ ಮುಗಿದ ಬಳಿಕ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ. ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಶ್ರೀರಂಗಪಟ್ಟಣದ ಶ್ರೀರಂಗನಾಥ, ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿದೇವಿ, ಅರಮನೆಯ ಆವರಣದಲ್ಲಿರುವ ತ್ರಿನೇಶ್ವರ, ಕೋಡಿ ಸೋಮೇಶ್ವರ, ಕೋಟೆ ಆಂಜನೇಯಸ್ವಾಮಿ, ಗಣೇಶ ದೇವಾಲಯ, ಕೃಷ್ಣನ ದೇವಾಲಯ ಸೇರಿದಂತೆ ೩೩ ದೇವಾಲಯಗಳಿಂದ ತಂದ ಪ್ರಸಾದ ಸೇವಿಸಿದ ನಂತರ ದರ್ಬಾರ್ ಅಂತಿಮಗೊಳ್ಳಲಿದೆ. ಈ ವೇಳೆ ಅರಮನೆಯ ಬ್ಯಾಂಡ್ ವಾದನದ ತಂಡ ‘ಕಾೋಂ ಶ್ರೀ ಗೌರಿ’ ಗೀತೆಯನ್ನು ನುಡಿಸಲಿದ್ದಾರೆ.
ಸಾರ್ವಜನಿಕರಿಗೆ ನಿಷೇಧ: ಸೋಮವಾರ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧.೩೦ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆಯುಧ ಪೂಜೆ ದಿನವಾದ ಅ.೪ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨.೩೦ರವರೆಗೆ ಹಾಗೂ ವಿಜಯದಶಮಿ ದಿನವಾದ ಅ.೫ರಂದು ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
ವಿಜಯದಶಮಿ ದಿನ ವಿಜಯಯಾತ್ರೆ: ಅ.೫ರಂದು ಬೆಳಿಗ್ಗೆ ೧೧ಕ್ಕೆ ಆನೆಬಾಗಿಲು ಬಳಿ ಪಟ್ಟದ ಆನೆ, ಹಸು, ಕುದುರೆ ಆಗಮಿಸಲಿದ್ದು, ೧೨.೧೦ಕ್ಕೆ ಆಯುಧಗಳನ್ನು ಉತ್ತರಪೂಜೆ ನಂತರ ಶ್ರೀ ಜೈಭುವನೇಶ್ವರಿ ದೇವಸ್ಥಾನಕ್ಕೆ ಕೊಂಡೊಯ್ಯಲಾಗುವುದು. ಈ ವೇಳೆ ವಿಜಯಯಾತ್ರೆ ಶಮೀ ವೃಕ್ಷದ ಶಮೀಪೂಜೆ ನಡೆಯಲಿದೆ. ವಿಜಯಯಾತ್ರೆ ನಂತರ ಶ್ರೀಚಾಮುಂಡೇಶ್ವರಿ ದೇವಿ ಅಮ್ಮನವರನ್ನು ಕನ್ನಡಿ ತೊಟ್ಟಿಯಲ್ಲಿ ಬಿಜಯಂಗೈಸಲಾಗುವುದು.
ಅ.೨೦ರಂದು ಸಿಂಹಾಸನ ಹಾಗೂ ಭದ್ರಾಸನ ಬಿಡಿ ಭಾಗಗಳಾಗಿ ವಿಂಗಡಿಸಲಾಗುತ್ತದೆ. ನಂತರ ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್‌ಗೆ ಕೊಂಡೊಯ್ದು ಸುರಕ್ಷಿತವಾಗಿಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಅಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆವರೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿಷೇಧಿಸಲಾಗುತ್ತದೆ.

 

andolanait

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

34 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

1 hour ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

2 hours ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

3 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

3 hours ago