ಜಿಲ್ಲೆಗಳು

ಖಾಸಗಿ ದರ್ಬಾರಿಗೆ ಅಂಬಾವಿಲಾಸ ಅರಮನೆ ಸಜ್ಜು

ನವರಾತ್ರಿ ಪ್ರಯುಕ್ತ ಅರಮನೆಯಲ್ಲಿ ಹಲವು ಧಾರ್ಮಿಕ ಕಾರ್ಯ;
ಯದುವೀರ್‌ಗೆ ೮ನೇ ವರ್ಷದ ದರ್ಬಾರ್ ಸಂಭ್ರಮ

ಕೆ.ಬಿ.ರಮೇಶನಾಯಕ

ಮೈಸೂರು: ಯದುವಂಶದವರು ಅರಮನೆಯಲ್ಲಿ ಶರನ್ನವರಾತ್ರಿಯ ವೇಳೆ ನಡೆಸಿಕೊಂಡು ಬಂದಿರುವ ಖಾಸಗಿ ದರ್ಬಾರ್‌ಗೆ ಅರಮನೆ ಸಜ್ಜಾಗಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಇದು ಎಂಟನೇ ವರ್ಷದ ದರ್ಬಾರ್ ಆಗಿದೆ.
ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು ೧೦ ದಿನಗಳ ಕಾಲ ನಡೆಯಲಿವೆ. ನವರಾತ್ರಿ ಮೊದಲ ದಿನವಾದ ಸೆ.೨೫ರಂದು ಸೋಮವಾರ ಮುಂಜಾನೆ ೫.೧೦ರಿಂದ ೫.೩೦ರೊಳಗೆ ದರ್ಬಾರ್ ಹಾಲ್‌ನಲ್ಲಿ ಜೋಡಿಸಲಾಗಿರುವ ಸಿಂಹಾಸನಕ್ಕೆ ‘ಸಿಂಹ’ ಜೋಡಣಾ ಕಾರ್ಯ ನಡೆಯಲಿದೆ. ಬೆಳಿಗ್ಗೆ ೮.೦೫ರಿಂದ ೮.೫೫ರವರೆಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚಾಮುಂಡಿತೊಟ್ಟಿಯಲ್ಲಿ ಕಂಕಣ ಧಾರಣೆ ಮಾಡಲಾಗುತ್ತದೆ. ಬಳಿಕ ಚಾಮುಂಡಿತೊಟ್ಟಿಯಿಂದ ವಾಣಿವಿಲಾಸ ದೇವರ ಮನೆಗೆ ಕಂಕಣವನ್ನು ತಂದು ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. ೯.೩೦ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಸವಾರಿ ತೊಟ್ಟಿಗೆ ಆಗಮಿಸಲಿದೆ. ೯.೫೦ರಿಂದ ೧೦.೩೫ರೊಳಗೆ ಕಳಸ ಪೂಜೆ ಹಾಗೂ ಸಿಂಹಾರೋಹಣ ನೆರವೇರಲಿದೆ. ಬಳಿಕ ಖಾಸಗಿ ದರ್ಬಾರ್ ಜರುಗಲಿದೆ. ದರ್ಬಾರ್ ಮುಗಿದ ಬಳಿಕ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ. ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಶ್ರೀರಂಗಪಟ್ಟಣದ ಶ್ರೀರಂಗನಾಥ, ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿದೇವಿ, ಅರಮನೆಯ ಆವರಣದಲ್ಲಿರುವ ತ್ರಿನೇಶ್ವರ, ಕೋಡಿ ಸೋಮೇಶ್ವರ, ಕೋಟೆ ಆಂಜನೇಯಸ್ವಾಮಿ, ಗಣೇಶ ದೇವಾಲಯ, ಕೃಷ್ಣನ ದೇವಾಲಯ ಸೇರಿದಂತೆ ೩೩ ದೇವಾಲಯಗಳಿಂದ ತಂದ ಪ್ರಸಾದ ಸೇವಿಸಿದ ನಂತರ ದರ್ಬಾರ್ ಅಂತಿಮಗೊಳ್ಳಲಿದೆ. ಈ ವೇಳೆ ಅರಮನೆಯ ಬ್ಯಾಂಡ್ ವಾದನದ ತಂಡ ‘ಕಾೋಂ ಶ್ರೀ ಗೌರಿ’ ಗೀತೆಯನ್ನು ನುಡಿಸಲಿದ್ದಾರೆ.
ಸಾರ್ವಜನಿಕರಿಗೆ ನಿಷೇಧ: ಸೋಮವಾರ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧.೩೦ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆಯುಧ ಪೂಜೆ ದಿನವಾದ ಅ.೪ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨.೩೦ರವರೆಗೆ ಹಾಗೂ ವಿಜಯದಶಮಿ ದಿನವಾದ ಅ.೫ರಂದು ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
ವಿಜಯದಶಮಿ ದಿನ ವಿಜಯಯಾತ್ರೆ: ಅ.೫ರಂದು ಬೆಳಿಗ್ಗೆ ೧೧ಕ್ಕೆ ಆನೆಬಾಗಿಲು ಬಳಿ ಪಟ್ಟದ ಆನೆ, ಹಸು, ಕುದುರೆ ಆಗಮಿಸಲಿದ್ದು, ೧೨.೧೦ಕ್ಕೆ ಆಯುಧಗಳನ್ನು ಉತ್ತರಪೂಜೆ ನಂತರ ಶ್ರೀ ಜೈಭುವನೇಶ್ವರಿ ದೇವಸ್ಥಾನಕ್ಕೆ ಕೊಂಡೊಯ್ಯಲಾಗುವುದು. ಈ ವೇಳೆ ವಿಜಯಯಾತ್ರೆ ಶಮೀ ವೃಕ್ಷದ ಶಮೀಪೂಜೆ ನಡೆಯಲಿದೆ. ವಿಜಯಯಾತ್ರೆ ನಂತರ ಶ್ರೀಚಾಮುಂಡೇಶ್ವರಿ ದೇವಿ ಅಮ್ಮನವರನ್ನು ಕನ್ನಡಿ ತೊಟ್ಟಿಯಲ್ಲಿ ಬಿಜಯಂಗೈಸಲಾಗುವುದು.
ಅ.೨೦ರಂದು ಸಿಂಹಾಸನ ಹಾಗೂ ಭದ್ರಾಸನ ಬಿಡಿ ಭಾಗಗಳಾಗಿ ವಿಂಗಡಿಸಲಾಗುತ್ತದೆ. ನಂತರ ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್‌ಗೆ ಕೊಂಡೊಯ್ದು ಸುರಕ್ಷಿತವಾಗಿಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಅಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆವರೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿಷೇಧಿಸಲಾಗುತ್ತದೆ.

 

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago