ಜಿಲ್ಲೆಗಳು

ಖಾಸಗಿ ದರ್ಬಾರಿಗೆ ಅಂಬಾವಿಲಾಸ ಅರಮನೆ ಸಜ್ಜು

ನವರಾತ್ರಿ ಪ್ರಯುಕ್ತ ಅರಮನೆಯಲ್ಲಿ ಹಲವು ಧಾರ್ಮಿಕ ಕಾರ್ಯ;
ಯದುವೀರ್‌ಗೆ ೮ನೇ ವರ್ಷದ ದರ್ಬಾರ್ ಸಂಭ್ರಮ

ಕೆ.ಬಿ.ರಮೇಶನಾಯಕ

ಮೈಸೂರು: ಯದುವಂಶದವರು ಅರಮನೆಯಲ್ಲಿ ಶರನ್ನವರಾತ್ರಿಯ ವೇಳೆ ನಡೆಸಿಕೊಂಡು ಬಂದಿರುವ ಖಾಸಗಿ ದರ್ಬಾರ್‌ಗೆ ಅರಮನೆ ಸಜ್ಜಾಗಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಇದು ಎಂಟನೇ ವರ್ಷದ ದರ್ಬಾರ್ ಆಗಿದೆ.
ಅರಮನೆಯಲ್ಲಿ ನವರಾತ್ರಿಯಲ್ಲಿ ನಡೆಯುವ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳು ೧೦ ದಿನಗಳ ಕಾಲ ನಡೆಯಲಿವೆ. ನವರಾತ್ರಿ ಮೊದಲ ದಿನವಾದ ಸೆ.೨೫ರಂದು ಸೋಮವಾರ ಮುಂಜಾನೆ ೫.೧೦ರಿಂದ ೫.೩೦ರೊಳಗೆ ದರ್ಬಾರ್ ಹಾಲ್‌ನಲ್ಲಿ ಜೋಡಿಸಲಾಗಿರುವ ಸಿಂಹಾಸನಕ್ಕೆ ‘ಸಿಂಹ’ ಜೋಡಣಾ ಕಾರ್ಯ ನಡೆಯಲಿದೆ. ಬೆಳಿಗ್ಗೆ ೮.೦೫ರಿಂದ ೮.೫೫ರವರೆಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚಾಮುಂಡಿತೊಟ್ಟಿಯಲ್ಲಿ ಕಂಕಣ ಧಾರಣೆ ಮಾಡಲಾಗುತ್ತದೆ. ಬಳಿಕ ಚಾಮುಂಡಿತೊಟ್ಟಿಯಿಂದ ವಾಣಿವಿಲಾಸ ದೇವರ ಮನೆಗೆ ಕಂಕಣವನ್ನು ತಂದು ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. ೯.೩೦ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಸವಾರಿ ತೊಟ್ಟಿಗೆ ಆಗಮಿಸಲಿದೆ. ೯.೫೦ರಿಂದ ೧೦.೩೫ರೊಳಗೆ ಕಳಸ ಪೂಜೆ ಹಾಗೂ ಸಿಂಹಾರೋಹಣ ನೆರವೇರಲಿದೆ. ಬಳಿಕ ಖಾಸಗಿ ದರ್ಬಾರ್ ಜರುಗಲಿದೆ. ದರ್ಬಾರ್ ಮುಗಿದ ಬಳಿಕ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ. ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ, ಶ್ರೀರಂಗಪಟ್ಟಣದ ಶ್ರೀರಂಗನಾಥ, ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿದೇವಿ, ಅರಮನೆಯ ಆವರಣದಲ್ಲಿರುವ ತ್ರಿನೇಶ್ವರ, ಕೋಡಿ ಸೋಮೇಶ್ವರ, ಕೋಟೆ ಆಂಜನೇಯಸ್ವಾಮಿ, ಗಣೇಶ ದೇವಾಲಯ, ಕೃಷ್ಣನ ದೇವಾಲಯ ಸೇರಿದಂತೆ ೩೩ ದೇವಾಲಯಗಳಿಂದ ತಂದ ಪ್ರಸಾದ ಸೇವಿಸಿದ ನಂತರ ದರ್ಬಾರ್ ಅಂತಿಮಗೊಳ್ಳಲಿದೆ. ಈ ವೇಳೆ ಅರಮನೆಯ ಬ್ಯಾಂಡ್ ವಾದನದ ತಂಡ ‘ಕಾೋಂ ಶ್ರೀ ಗೌರಿ’ ಗೀತೆಯನ್ನು ನುಡಿಸಲಿದ್ದಾರೆ.
ಸಾರ್ವಜನಿಕರಿಗೆ ನಿಷೇಧ: ಸೋಮವಾರ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧.೩೦ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆಯುಧ ಪೂಜೆ ದಿನವಾದ ಅ.೪ರಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೨.೩೦ರವರೆಗೆ ಹಾಗೂ ವಿಜಯದಶಮಿ ದಿನವಾದ ಅ.೫ರಂದು ದಿನವಿಡೀ ಅರಮನೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
ವಿಜಯದಶಮಿ ದಿನ ವಿಜಯಯಾತ್ರೆ: ಅ.೫ರಂದು ಬೆಳಿಗ್ಗೆ ೧೧ಕ್ಕೆ ಆನೆಬಾಗಿಲು ಬಳಿ ಪಟ್ಟದ ಆನೆ, ಹಸು, ಕುದುರೆ ಆಗಮಿಸಲಿದ್ದು, ೧೨.೧೦ಕ್ಕೆ ಆಯುಧಗಳನ್ನು ಉತ್ತರಪೂಜೆ ನಂತರ ಶ್ರೀ ಜೈಭುವನೇಶ್ವರಿ ದೇವಸ್ಥಾನಕ್ಕೆ ಕೊಂಡೊಯ್ಯಲಾಗುವುದು. ಈ ವೇಳೆ ವಿಜಯಯಾತ್ರೆ ಶಮೀ ವೃಕ್ಷದ ಶಮೀಪೂಜೆ ನಡೆಯಲಿದೆ. ವಿಜಯಯಾತ್ರೆ ನಂತರ ಶ್ರೀಚಾಮುಂಡೇಶ್ವರಿ ದೇವಿ ಅಮ್ಮನವರನ್ನು ಕನ್ನಡಿ ತೊಟ್ಟಿಯಲ್ಲಿ ಬಿಜಯಂಗೈಸಲಾಗುವುದು.
ಅ.೨೦ರಂದು ಸಿಂಹಾಸನ ಹಾಗೂ ಭದ್ರಾಸನ ಬಿಡಿ ಭಾಗಗಳಾಗಿ ವಿಂಗಡಿಸಲಾಗುತ್ತದೆ. ನಂತರ ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್‌ಗೆ ಕೊಂಡೊಯ್ದು ಸುರಕ್ಷಿತವಾಗಿಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಅಂದು ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆವರೆಗೆ ಪ್ರವಾಸಿಗರು, ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿಷೇಧಿಸಲಾಗುತ್ತದೆ.

 

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

6 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

7 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

9 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

12 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago