ಮೈಸೂರು: ಸಚಿವ ಅಶ್ವತ್ಥ ನಾರಾಯಣ ಅವರು ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವುದನ್ನು ಖಂಡಿಸಿ ಫೆ.25ರಿಂದ ‘ನನ್ನನ್ನು ಹತ್ಯೆಮಾಡಿ’ ಎಂಬ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.25ರಂದು ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೆರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ. ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರಿಂದ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ್ದ ಬಗ್ಗೆ ಸುಳ್ಳು ಹೇಳುವ ಶಾಸಕ ಸಿ.ಟಿ.ರವಿ ಅವರನ್ನು ಕ್ಷೇತ್ರದ ಜನರು ಮುಂದಿನ ಚುನಾವಣೆಯಲ್ಲಿ ಮನೆಗೆ ಕಳುಹಿಸುವುದು ಖಚಿತ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಮಾಂಸಾಹಾರ ಸೇವಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಹೋಗಿದ್ದರು ಎಂದು ಆರೋಪ ಮಾಡಿದ್ದವರು ಇಂದು ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ್ ಮನೆಯಲ್ಲಿ ಮಾಂಸಾಹಾರ ಸೇವಿಸಿ ಸ್ಥಳೀಯ ದೇವಾಲಯದ ರಾಜಾಂಗಣ ನಾಗಬನ ಹಾಗೂ ಕರಿಬಂಟ ದೇವಸ್ಥಾನಕ್ಕೆ ಭೇಟಿ ನೀಡಿರುವ ವೀಡಿಯೋ ಲಭ್ಯವಿದೆ ಎಂದು ಆರೋಪಿಸಿದರು.
ಒಂದು ವೇಳೆ ಸುಳ್ಳು ಹೇಳುವ ಸ್ಪರ್ಧೆ ಏರ್ಪಡಿಸಿದರೆ ಮೊದಲನೇ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಎರಡನೇ ಸ್ಥಾನವನ್ನು ಶಾಸಕ ಸಿ.ಟಿ.ರವಿ ಪಡೆಯುತ್ತಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. 2023 ರ ಚುನಾವಣೆ ನಂತರ ಸಿ.ಟಿ.ರವಿ ಮಾಜಿ ಶಾಸಕ ಎಂಬ ಬಿರುದಿನೊಂದಿಗೆ ಮನೆಗೆ ಹೋಗುವುದು ಖಚಿತ ಎಂದರು.
‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು’ ಎಂದು ಎಚ್.ಡಿ.ದೇವೇಗೌಡರು ಹೇಳಿದ್ದಕ್ಕೆ ‘ಮುಸ್ಲಿಂ ಧರ್ಮದಲ್ಲಿ ಪುನರ್ಜನ್ಮದ ಬಗ್ಗೆ ನಂಬಿಕೆ ಇಲ್ಲ. ಹಾಗಾಗಿ ಈಗಲೇ ಹೋಗಿಬಿಡಿ’ ಎಂದು ಹೇಳುವ ಸಿ.ಟಿ.ರವಿ ಅವರ ಮಾತಿನ ಅರ್ಥ ದೇವೆಗೌಡರು ಸಾಯಬೇಕು ಎಂದೇ ಎಂದು ಪ್ರಶ್ನಿಸಿದರು. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಹುಣಸೂರು ಬಸವಣ್ಣ, ಮಾಧ್ಯಮ ಸಂಚಾಲಕ ಮಹೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…