ಜಿಲ್ಲೆಗಳು

ನಾಳೆಯಿಂದ ‘ನನ್ನನ್ನು ಹತ್ಯೆಮಾಡಿ’ ಅಭಿಯಾನ: ಬಿಜೆವಿ

ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಅಶ್ವತ್ಥ ನಾರಾಯಣ ಹೇಳಿಕೆಗೆ ಖಂಡನೆ

ಮೈಸೂರು: ಸಚಿವ ಅಶ್ವತ್ಥ ನಾರಾಯಣ ಅವರು ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವುದನ್ನು ಖಂಡಿಸಿ ಫೆ.25ರಿಂದ ‘ನನ್ನನ್ನು ಹತ್ಯೆಮಾಡಿ’ ಎಂಬ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ ಕುಮಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.25ರಂದು ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೆರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ. ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರಿಂದ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ್ದ ಬಗ್ಗೆ ಸುಳ್ಳು ಹೇಳುವ ಶಾಸಕ ಸಿ.ಟಿ.ರವಿ ಅವರನ್ನು ಕ್ಷೇತ್ರದ ಜನರು ಮುಂದಿನ ಚುನಾವಣೆಯಲ್ಲಿ ಮನೆಗೆ ಕಳುಹಿಸುವುದು ಖಚಿತ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಮಾಂಸಾಹಾರ ಸೇವಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಹೋಗಿದ್ದರು ಎಂದು ಆರೋಪ ಮಾಡಿದ್ದವರು ಇಂದು ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ್ ಮನೆಯಲ್ಲಿ ಮಾಂಸಾಹಾರ ಸೇವಿಸಿ ಸ್ಥಳೀಯ ದೇವಾಲಯದ ರಾಜಾಂಗಣ ನಾಗಬನ ಹಾಗೂ ಕರಿಬಂಟ ದೇವಸ್ಥಾನಕ್ಕೆ ಭೇಟಿ ನೀಡಿರುವ ವೀಡಿಯೋ ಲಭ್ಯವಿದೆ ಎಂದು ಆರೋಪಿಸಿದರು.
ಒಂದು ವೇಳೆ ಸುಳ್ಳು ಹೇಳುವ ಸ್ಪರ್ಧೆ ಏರ್ಪಡಿಸಿದರೆ ಮೊದಲನೇ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಎರಡನೇ ಸ್ಥಾನವನ್ನು ಶಾಸಕ ಸಿ.ಟಿ.ರವಿ ಪಡೆಯುತ್ತಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. 2023 ರ ಚುನಾವಣೆ ನಂತರ ಸಿ.ಟಿ.ರವಿ ಮಾಜಿ ಶಾಸಕ ಎಂಬ ಬಿರುದಿನೊಂದಿಗೆ ಮನೆಗೆ ಹೋಗುವುದು ಖಚಿತ ಎಂದರು.

‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು’ ಎಂದು ಎಚ್.ಡಿ.ದೇವೇಗೌಡರು ಹೇಳಿದ್ದಕ್ಕೆ ‘ಮುಸ್ಲಿಂ ಧರ್ಮದಲ್ಲಿ ಪುನರ್ಜನ್ಮದ ಬಗ್ಗೆ ನಂಬಿಕೆ ಇಲ್ಲ. ಹಾಗಾಗಿ ಈಗಲೇ ಹೋಗಿಬಿಡಿ’ ಎಂದು ಹೇಳುವ ಸಿ.ಟಿ.ರವಿ ಅವರ ಮಾತಿನ ಅರ್ಥ ದೇವೆಗೌಡರು ಸಾಯಬೇಕು ಎಂದೇ ಎಂದು ಪ್ರಶ್ನಿಸಿದರು. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಹುಣಸೂರು ಬಸವಣ್ಣ, ಮಾಧ್ಯಮ ಸಂಚಾಲಕ ಮಹೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

2 hours ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

2 hours ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

3 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

14 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

16 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

18 hours ago