ಜಿಲ್ಲೆಗಳು

ನಾಳೆಯಿಂದ ‘ನನ್ನನ್ನು ಹತ್ಯೆಮಾಡಿ’ ಅಭಿಯಾನ: ಬಿಜೆವಿ

ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಅಶ್ವತ್ಥ ನಾರಾಯಣ ಹೇಳಿಕೆಗೆ ಖಂಡನೆ

ಮೈಸೂರು: ಸಚಿವ ಅಶ್ವತ್ಥ ನಾರಾಯಣ ಅವರು ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಹೇಳಿಕೆ ನೀಡಿರುವುದನ್ನು ಖಂಡಿಸಿ ಫೆ.25ರಿಂದ ‘ನನ್ನನ್ನು ಹತ್ಯೆಮಾಡಿ’ ಎಂಬ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ ಕುಮಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.25ರಂದು ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಕಾಲ್ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೆರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ. ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರಿಂದ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ತೆರಳಿದ್ದ ಬಗ್ಗೆ ಸುಳ್ಳು ಹೇಳುವ ಶಾಸಕ ಸಿ.ಟಿ.ರವಿ ಅವರನ್ನು ಕ್ಷೇತ್ರದ ಜನರು ಮುಂದಿನ ಚುನಾವಣೆಯಲ್ಲಿ ಮನೆಗೆ ಕಳುಹಿಸುವುದು ಖಚಿತ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಮಾಂಸಾಹಾರ ಸೇವಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಹೋಗಿದ್ದರು ಎಂದು ಆರೋಪ ಮಾಡಿದ್ದವರು ಇಂದು ಭಟ್ಕಳದ ಬಿಜೆಪಿ ಶಾಸಕ ಸುನೀಲ್ ನಾಯ್ಕ್ ಮನೆಯಲ್ಲಿ ಮಾಂಸಾಹಾರ ಸೇವಿಸಿ ಸ್ಥಳೀಯ ದೇವಾಲಯದ ರಾಜಾಂಗಣ ನಾಗಬನ ಹಾಗೂ ಕರಿಬಂಟ ದೇವಸ್ಥಾನಕ್ಕೆ ಭೇಟಿ ನೀಡಿರುವ ವೀಡಿಯೋ ಲಭ್ಯವಿದೆ ಎಂದು ಆರೋಪಿಸಿದರು.
ಒಂದು ವೇಳೆ ಸುಳ್ಳು ಹೇಳುವ ಸ್ಪರ್ಧೆ ಏರ್ಪಡಿಸಿದರೆ ಮೊದಲನೇ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಎರಡನೇ ಸ್ಥಾನವನ್ನು ಶಾಸಕ ಸಿ.ಟಿ.ರವಿ ಪಡೆಯುತ್ತಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. 2023 ರ ಚುನಾವಣೆ ನಂತರ ಸಿ.ಟಿ.ರವಿ ಮಾಜಿ ಶಾಸಕ ಎಂಬ ಬಿರುದಿನೊಂದಿಗೆ ಮನೆಗೆ ಹೋಗುವುದು ಖಚಿತ ಎಂದರು.

‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕು’ ಎಂದು ಎಚ್.ಡಿ.ದೇವೇಗೌಡರು ಹೇಳಿದ್ದಕ್ಕೆ ‘ಮುಸ್ಲಿಂ ಧರ್ಮದಲ್ಲಿ ಪುನರ್ಜನ್ಮದ ಬಗ್ಗೆ ನಂಬಿಕೆ ಇಲ್ಲ. ಹಾಗಾಗಿ ಈಗಲೇ ಹೋಗಿಬಿಡಿ’ ಎಂದು ಹೇಳುವ ಸಿ.ಟಿ.ರವಿ ಅವರ ಮಾತಿನ ಅರ್ಥ ದೇವೆಗೌಡರು ಸಾಯಬೇಕು ಎಂದೇ ಎಂದು ಪ್ರಶ್ನಿಸಿದರು. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಹುಣಸೂರು ಬಸವಣ್ಣ, ಮಾಧ್ಯಮ ಸಂಚಾಲಕ ಮಹೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago