ಜಿಲ್ಲೆಗಳು

ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ : ಜಿ.ಟಿ.ದೇವೇಗೌಡ

ಮೈಸೂರು : ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಮೈಸೂರು ತಾ. ಕೆ. ಹೆಮ್ಮನಹಳ್ಳಿ  ಗ್ರಾಮದಲ್ಲಿ ನಾಲ್ಕು ಹೊಸ ಕೊಠಡಿಗಳು ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ನೈಜ ಪ್ರತಿಭೆ ಹೊರಹೊಮ್ಮತ್ತದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ರಾಜಕೀಯ,ಸಾಹಿತ್ಯ, ಸಿನಿಮಾ, ಶಿಕ್ಷಣ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ.

ಕೆ. ಹೆಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಅನುಭವಮಂಟಪ ನಾಟಕ ಅಭಿನಯಿಸುತ್ತಿರುವುದು  ತುಂಬಾ ಸಂತಸದ ವಿಷಯ. ಒಂದು ಎಕರೆ ಜಾಗದಲ್ಲಿ ನಾಲ್ಕು ಕೊಠಡಿಗಳು ನಿರ್ಮಾಣವಾಗಿದ್ದು, ಈ ಶಾಲೆಗೆ ಅಗತ್ಯವಾದ ಶೌಚಾಲಯ, ನೀರು ಮತ್ತು ಕಾಂಪೌಂಡ್ ಸೌಲಭ್ಯಗಳನ್ನು ಕೂಡಲೇ ಬೋಗಾದಿ ಪಟ್ಟಣ ಪಂಚಾಯಿತಿಯವರು ನಿರ್ಮಿಸಲು ಸ್ಥಳದಲ್ಲಿಯೇ ಮುಖ್ಯಾಧಿಕಾರಿಗಳಿಗೆ ಆದೇಶಿಸಿದರು.

ವಿದ್ಯಾರ್ಥಿಗಳು ತಂದೆ ತಾಯಿಗಳನ್ನು ಗೌರವಿಸಬೇಕು ಮತ್ತು ಅವರಿಗೆ ವಯಸ್ಸಾದ ಮೇಲೆ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ನೀತಿ ಪಾಠ ಹೇಳಿದರು. ಶಾಲಾವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ನೃತ್ಯ, ಅನುಭವಮಂಟಪ ನಾಟಕ ಮತ್ತು ಛದ್ಮವೇಷ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಬಿ.ಆರ್.ಸಿ ಮಹದೇವು, ಬೋಗಾದಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ. ಬಸವರಾಜು, ಮಾಜಿ ಜಿ.ಪಂ. ಸದಸ್ಯ ಮರಿಜೋಗಿಗೌಡ, ಮಾಜಿ ಗ್ರಾ.ಪಂ ಸದಸ್ಯರಾದ ಎಂ ಗಣೇಶ್, ರಮೇಶ್, ಹನುಮೇಶ್, ಎಂ.ಆರ್.ಮಾಣಿಕ್ಯಂ, ವಸಂತ, ಪೂರ್ಣಿಮಾ, ಮಾಲೇಗೌಡ, ಮಹದೇವ್, ರಮೇಶ್, ಪುನೀತ್ ಕುಮಾರ್, ಗುರುಪ್ರಸಾದ್, ನಾಗಮಣಿ, ರೂಪ ಕುಮಾರಸ್ವಾಮಿ, ಸಿದ್ಧಲಿಂಗು, ಲಲಿತ, ಮಂಜುನಾಥ್ ಶಾಲಾ ಮುಖ್ಯ ಶಿಕ್ಷಕಿ ಸುಮಂಗಲ ಸಹಶಿಕ್ಷಕರುಗಳಾದ ಕುಮಾರಸ್ವಾಮಿ, ತಾರಾ, ಕಲ್ಪನಾಬಾಯಿ ಉಪಸ್ಥಿತರಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago