ಮೈಸೂರು : ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಮೈಸೂರು ತಾ. ಕೆ. ಹೆಮ್ಮನಹಳ್ಳಿ ಗ್ರಾಮದಲ್ಲಿ ನಾಲ್ಕು ಹೊಸ ಕೊಠಡಿಗಳು ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ನೈಜ ಪ್ರತಿಭೆ ಹೊರಹೊಮ್ಮತ್ತದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ರಾಜಕೀಯ,ಸಾಹಿತ್ಯ, ಸಿನಿಮಾ, ಶಿಕ್ಷಣ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ.
ಕೆ. ಹೆಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಅನುಭವಮಂಟಪ ನಾಟಕ ಅಭಿನಯಿಸುತ್ತಿರುವುದು ತುಂಬಾ ಸಂತಸದ ವಿಷಯ. ಒಂದು ಎಕರೆ ಜಾಗದಲ್ಲಿ ನಾಲ್ಕು ಕೊಠಡಿಗಳು ನಿರ್ಮಾಣವಾಗಿದ್ದು, ಈ ಶಾಲೆಗೆ ಅಗತ್ಯವಾದ ಶೌಚಾಲಯ, ನೀರು ಮತ್ತು ಕಾಂಪೌಂಡ್ ಸೌಲಭ್ಯಗಳನ್ನು ಕೂಡಲೇ ಬೋಗಾದಿ ಪಟ್ಟಣ ಪಂಚಾಯಿತಿಯವರು ನಿರ್ಮಿಸಲು ಸ್ಥಳದಲ್ಲಿಯೇ ಮುಖ್ಯಾಧಿಕಾರಿಗಳಿಗೆ ಆದೇಶಿಸಿದರು.
ವಿದ್ಯಾರ್ಥಿಗಳು ತಂದೆ ತಾಯಿಗಳನ್ನು ಗೌರವಿಸಬೇಕು ಮತ್ತು ಅವರಿಗೆ ವಯಸ್ಸಾದ ಮೇಲೆ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ನೀತಿ ಪಾಠ ಹೇಳಿದರು. ಶಾಲಾವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ನೃತ್ಯ, ಅನುಭವಮಂಟಪ ನಾಟಕ ಮತ್ತು ಛದ್ಮವೇಷ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಬಿ.ಆರ್.ಸಿ ಮಹದೇವು, ಬೋಗಾದಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ. ಬಸವರಾಜು, ಮಾಜಿ ಜಿ.ಪಂ. ಸದಸ್ಯ ಮರಿಜೋಗಿಗೌಡ, ಮಾಜಿ ಗ್ರಾ.ಪಂ ಸದಸ್ಯರಾದ ಎಂ ಗಣೇಶ್, ರಮೇಶ್, ಹನುಮೇಶ್, ಎಂ.ಆರ್.ಮಾಣಿಕ್ಯಂ, ವಸಂತ, ಪೂರ್ಣಿಮಾ, ಮಾಲೇಗೌಡ, ಮಹದೇವ್, ರಮೇಶ್, ಪುನೀತ್ ಕುಮಾರ್, ಗುರುಪ್ರಸಾದ್, ನಾಗಮಣಿ, ರೂಪ ಕುಮಾರಸ್ವಾಮಿ, ಸಿದ್ಧಲಿಂಗು, ಲಲಿತ, ಮಂಜುನಾಥ್ ಶಾಲಾ ಮುಖ್ಯ ಶಿಕ್ಷಕಿ ಸುಮಂಗಲ ಸಹಶಿಕ್ಷಕರುಗಳಾದ ಕುಮಾರಸ್ವಾಮಿ, ತಾರಾ, ಕಲ್ಪನಾಬಾಯಿ ಉಪಸ್ಥಿತರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…