ಜಿಲ್ಲೆಗಳು

ಕೊಡಗು: ಇಬ್ಬರನ್ನು ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ

ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು  ಕೊನೆಗೂ  ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ  ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಹುಲಿಯನ್ನು ಸೆರೆ ಹಿಡಿಯವಂತೆ ಸೋಮವಾರ ರಾತ್ರಿ ಅದೇಶ ಪ್ರಕಟಿಸಿತ್ತು.

ಈ ಹಿನ್ನೆಲೆಯಲ್ಲಿ ‌ಮಂಗಳವಾರ ಬೆಳಗ್ಗೆಯಿಂದಲೇ ಹುಲಿ ಹಿಡಿಯಲು 5 ಸಾಕಾನೆಗಳ ಸಹಕಾರದೊಂದಿಗೆ 150ಕ್ಕೂ ಅಧಿಕ ಸಿಬ್ಬಂದಿ ಫೀಲ್ಡ್‌ಗೆ ಇಳಿದು ಕಾಫಿ ತೋಟದಲ್ಲಿ ಹುಡುಕಾಟ ನಡೆಸಿದ್ದರು. ಆದರೆ ಗ್ರಾಮದ ಯಾವುದೇ ತೋಟದಲ್ಲೂ ಹುಲಿ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ಡೇಟಿಂಗ್‌ ಮಾಡುತ್ತಿದ್ದ 25ರ ಯುವತಿಯನ್ನು ಕೊಲೆ ಮಾಡಿ ಢಾಬಾದ ಫ್ರಿಜರ್‌ನಲ್ಲಿ ಬಚ್ಚಿಟ್ಟ

ಮಧ್ಯಾಹ್ನದ ಬಳಿಕ ಆಪರೇಷನ್ ಟೈಗರ್ ಅರಂಭ ಮಾಡಿದ ಅರಣ್ಯ ಇಲಾಖೆಯ ಸಿಬ್ಬಂದಿಗೆ ನಾಣಚ್ಚಿ ಗೇಟ್ ಸಮೀಪ ಹುಲಿಯ ಚಲನವಲನ ಪತ್ತೆಯಾಗಿತ್ತು. ಈ ಬೆನ್ನಲ್ಲೇ‌ ದೂರದಿಂದಲೇ ಸಿಬ್ಬಂದಿ ಅರಿವಳಿಕೆಯನ್ನು ಶೂಟ್‌ ಮಾಡುವ ಮೂಲಕ ಪ್ರಜ್ಞೆ ತಪ್ಪಿಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಸೆರೆಯಾದ ಹುಲಿಗೆ 8 ಅಥವಾ 9 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಹಿಂದೆ ಜಾನುವಾರುಗಳು ಮಾತ್ರ ಬಲಿಯಾಗುತ್ತಿದ್ದವು. ಆದರೆ ಈಗ ಜನರು ಹುಲಿಗೆ ಆಹಾರವಾಗುತ್ತಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಲೇ ಮನುಷ್ಯರು ಬಲಿಯಾಗುತ್ತಿದ್ದಾರೆ. ಹುಲಿಯನ್ನು ಹೇಗಾದರೂ ಮಾಡಿ ಹಿಡಿಯಲೇಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದು ಆಗ್ರಹಿಸಿದ್ದರು.

andolanait

Recent Posts

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 mins ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

29 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

39 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

1 hour ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

5 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago