ಜಿಲ್ಲೆಗಳು

ಕೊಡಗಿನಲ್ಲಿ ಮತ್ತೊಂದು ಸಾಕಾನೆ ಶಿಬಿರ ಲೋಕಾರ್ಪಣೆ

ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ

ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ ಲೋಕಾರ್ಪಣೆಗೊಂಡಿತು.
ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಿದರು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಆಹಾರ ತಿನ್ನಿಸಲಾಯಿತು. ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಶಿಬಿರದಲ್ಲಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್, ಅರಣ್ಯ ಇಲಾಖೆಯ ೪೦ ಎಕರೆ ಜಾಗದಲ್ಲಿ ಸಾಕಾನೆ ಶಿಬಿರ ಆರಂಭಿಸಲಾಗಿದೆ. ೧೫ ಆನೆಗಳನ್ನು ದುಬಾರೆಯಿಂದ ಹಾರಂಗಿಗೆ ಕರೆತರುವ ಕೆಲಸ ಮಾಡಲಾಗುತ್ತಿದೆ. ಇಲ್ಲಿಯೂ ಪ್ರವಾಸಿಗರ ಭೇಟಿಗೆ ಅನುವು ಮಾಡಿಕೊಡಲಾಗುತ್ತದೆ. ಹಾರಂಗಿಗೆ ಬರುವ ಪ್ರವಾಸಿಗರು ಸಾಕಾನೆಗಳ ವೀಕ್ಷಣೆ ಮಾಡಬಹುದಾಗಿದೆ ಎಂದರು.
ಪ್ರಾಣಿ ದಯಾ ಸಂಘದ ಆಕ್ಷೇಪದ ಹಿನ್ನೆಲೆ ಆನೆ ಸಫಾರಿ ಮಾಡಬಾರದೆಂದು ಸುಪ್ರಿಂ ಕೋರ್ಟ್ ಆದೇಶ ಇರುವುದರಿಂದ ಸಫಾರಿಗೆ ಅವಕಾಶ ನೀಡಿಲ್ಲ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತನಾಡಿ ಆನೆ ಸಫಾರಿಗೆ ಅವಕಾಶ ಕಲ್ಪಿಸಲು ಒತ್ತಾಯ ಮಾಡಲಾಗುತ್ತದೆ. ಆನೆ ಸಫಾರಿಯಿಂದ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ. ಅರಣ್ಯ ಇಲಾಖೆಗೂ ಆದಾಯ ದೊರಕುತ್ತದೆ.
ಸಿಸಿಎಫ್ ನಿರಂಜನ ಮೂರ್ತಿ ಮಾತನಾಡಿ, ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹಾರಂಗಿ ಬಳಿ ಮತ್ತೊಂದು ಸಾಕಾನೆ ಶಿಬಿರವನ್ನು ಲೋಕಾರ್ಪಣೆಗೊಳಿಸಲಾಗಿದೆ. ಕಳೆದ ೨ ವರ್ಷಗಳಿಂದ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ಮೂಲಭೂತ ಸೌಲಭ್ಯದೊಂದಿಗೆ ಆನೆ ಶಿಬಿರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾಕಾನೆ ಶಿಬಿರ ಹಾಗೂ ವೃಕ್ಷೆದ್ಯಾನವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಬಿ.ಸಿ.ಸತೀಶ್, ಡಿಎಫ್‌ಒ ಪೂವಯ್ಯ, ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್‌ನಾಯಕ್, ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ.ಚಂದ್ರ, ಡಿವೈಎಸ್ಪಿ ಗಂಗಾಧರ್, ಸಿಐ ಮಹೇಶ್, ಎಸಿಎಫ್ ಗೋಪಾಲ್, ಆರ್‌ಎಫ್‌ಒ ಶಿವರಾಂ ಮತ್ತಿತರರು ಇದ್ದರು.

andolanait

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

21 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

54 mins ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

1 hour ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

1 hour ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

2 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago