ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ
ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ ಲೋಕಾರ್ಪಣೆಗೊಂಡಿತು.
ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಿದರು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಆಹಾರ ತಿನ್ನಿಸಲಾಯಿತು. ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಶಿಬಿರದಲ್ಲಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್, ಅರಣ್ಯ ಇಲಾಖೆಯ ೪೦ ಎಕರೆ ಜಾಗದಲ್ಲಿ ಸಾಕಾನೆ ಶಿಬಿರ ಆರಂಭಿಸಲಾಗಿದೆ. ೧೫ ಆನೆಗಳನ್ನು ದುಬಾರೆಯಿಂದ ಹಾರಂಗಿಗೆ ಕರೆತರುವ ಕೆಲಸ ಮಾಡಲಾಗುತ್ತಿದೆ. ಇಲ್ಲಿಯೂ ಪ್ರವಾಸಿಗರ ಭೇಟಿಗೆ ಅನುವು ಮಾಡಿಕೊಡಲಾಗುತ್ತದೆ. ಹಾರಂಗಿಗೆ ಬರುವ ಪ್ರವಾಸಿಗರು ಸಾಕಾನೆಗಳ ವೀಕ್ಷಣೆ ಮಾಡಬಹುದಾಗಿದೆ ಎಂದರು.
ಸಿಸಿಎಫ್ ನಿರಂಜನ ಮೂರ್ತಿ ಮಾತನಾಡಿ, ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹಾರಂಗಿ ಬಳಿ ಮತ್ತೊಂದು ಸಾಕಾನೆ ಶಿಬಿರವನ್ನು ಲೋಕಾರ್ಪಣೆಗೊಳಿಸಲಾಗಿದೆ. ಕಳೆದ ೨ ವರ್ಷಗಳಿಂದ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ಮೂಲಭೂತ ಸೌಲಭ್ಯದೊಂದಿಗೆ ಆನೆ ಶಿಬಿರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾಕಾನೆ ಶಿಬಿರ ಹಾಗೂ ವೃಕ್ಷೆದ್ಯಾನವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಬಿ.ಸಿ.ಸತೀಶ್, ಡಿಎಫ್ಒ ಪೂವಯ್ಯ, ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ನಾಯಕ್, ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ.ಚಂದ್ರ, ಡಿವೈಎಸ್ಪಿ ಗಂಗಾಧರ್, ಸಿಐ ಮಹೇಶ್, ಎಸಿಎಫ್ ಗೋಪಾಲ್, ಆರ್ಎಫ್ಒ ಶಿವರಾಂ ಮತ್ತಿತರರು ಇದ್ದರು.
ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…