ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ
ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ ಲೋಕಾರ್ಪಣೆಗೊಂಡಿತು.
ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಿದರು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಆಹಾರ ತಿನ್ನಿಸಲಾಯಿತು. ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಶಿಬಿರದಲ್ಲಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್, ಅರಣ್ಯ ಇಲಾಖೆಯ ೪೦ ಎಕರೆ ಜಾಗದಲ್ಲಿ ಸಾಕಾನೆ ಶಿಬಿರ ಆರಂಭಿಸಲಾಗಿದೆ. ೧೫ ಆನೆಗಳನ್ನು ದುಬಾರೆಯಿಂದ ಹಾರಂಗಿಗೆ ಕರೆತರುವ ಕೆಲಸ ಮಾಡಲಾಗುತ್ತಿದೆ. ಇಲ್ಲಿಯೂ ಪ್ರವಾಸಿಗರ ಭೇಟಿಗೆ ಅನುವು ಮಾಡಿಕೊಡಲಾಗುತ್ತದೆ. ಹಾರಂಗಿಗೆ ಬರುವ ಪ್ರವಾಸಿಗರು ಸಾಕಾನೆಗಳ ವೀಕ್ಷಣೆ ಮಾಡಬಹುದಾಗಿದೆ ಎಂದರು.
ಸಿಸಿಎಫ್ ನಿರಂಜನ ಮೂರ್ತಿ ಮಾತನಾಡಿ, ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹಾರಂಗಿ ಬಳಿ ಮತ್ತೊಂದು ಸಾಕಾನೆ ಶಿಬಿರವನ್ನು ಲೋಕಾರ್ಪಣೆಗೊಳಿಸಲಾಗಿದೆ. ಕಳೆದ ೨ ವರ್ಷಗಳಿಂದ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ಮೂಲಭೂತ ಸೌಲಭ್ಯದೊಂದಿಗೆ ಆನೆ ಶಿಬಿರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾಕಾನೆ ಶಿಬಿರ ಹಾಗೂ ವೃಕ್ಷೆದ್ಯಾನವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಬಿ.ಸಿ.ಸತೀಶ್, ಡಿಎಫ್ಒ ಪೂವಯ್ಯ, ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ನಾಯಕ್, ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ.ಚಂದ್ರ, ಡಿವೈಎಸ್ಪಿ ಗಂಗಾಧರ್, ಸಿಐ ಮಹೇಶ್, ಎಸಿಎಫ್ ಗೋಪಾಲ್, ಆರ್ಎಫ್ಒ ಶಿವರಾಂ ಮತ್ತಿತರರು ಇದ್ದರು.
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…