ಜಿಲ್ಲೆಗಳು

ಕೊಡಗಿನಲ್ಲಿ ಮತ್ತೊಂದು ಸಾಕಾನೆ ಶಿಬಿರ ಲೋಕಾರ್ಪಣೆ

ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ

ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ ಲೋಕಾರ್ಪಣೆಗೊಂಡಿತು.
ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಿದರು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಆಹಾರ ತಿನ್ನಿಸಲಾಯಿತು. ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಶಿಬಿರದಲ್ಲಿ ಗಿಡಗಳನ್ನು ನೆಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್, ಅರಣ್ಯ ಇಲಾಖೆಯ ೪೦ ಎಕರೆ ಜಾಗದಲ್ಲಿ ಸಾಕಾನೆ ಶಿಬಿರ ಆರಂಭಿಸಲಾಗಿದೆ. ೧೫ ಆನೆಗಳನ್ನು ದುಬಾರೆಯಿಂದ ಹಾರಂಗಿಗೆ ಕರೆತರುವ ಕೆಲಸ ಮಾಡಲಾಗುತ್ತಿದೆ. ಇಲ್ಲಿಯೂ ಪ್ರವಾಸಿಗರ ಭೇಟಿಗೆ ಅನುವು ಮಾಡಿಕೊಡಲಾಗುತ್ತದೆ. ಹಾರಂಗಿಗೆ ಬರುವ ಪ್ರವಾಸಿಗರು ಸಾಕಾನೆಗಳ ವೀಕ್ಷಣೆ ಮಾಡಬಹುದಾಗಿದೆ ಎಂದರು.
ಪ್ರಾಣಿ ದಯಾ ಸಂಘದ ಆಕ್ಷೇಪದ ಹಿನ್ನೆಲೆ ಆನೆ ಸಫಾರಿ ಮಾಡಬಾರದೆಂದು ಸುಪ್ರಿಂ ಕೋರ್ಟ್ ಆದೇಶ ಇರುವುದರಿಂದ ಸಫಾರಿಗೆ ಅವಕಾಶ ನೀಡಿಲ್ಲ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತನಾಡಿ ಆನೆ ಸಫಾರಿಗೆ ಅವಕಾಶ ಕಲ್ಪಿಸಲು ಒತ್ತಾಯ ಮಾಡಲಾಗುತ್ತದೆ. ಆನೆ ಸಫಾರಿಯಿಂದ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ. ಅರಣ್ಯ ಇಲಾಖೆಗೂ ಆದಾಯ ದೊರಕುತ್ತದೆ.
ಸಿಸಿಎಫ್ ನಿರಂಜನ ಮೂರ್ತಿ ಮಾತನಾಡಿ, ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹಾರಂಗಿ ಬಳಿ ಮತ್ತೊಂದು ಸಾಕಾನೆ ಶಿಬಿರವನ್ನು ಲೋಕಾರ್ಪಣೆಗೊಳಿಸಲಾಗಿದೆ. ಕಳೆದ ೨ ವರ್ಷಗಳಿಂದ ಅಗತ್ಯ ತಯಾರಿ ಮಾಡಿಕೊಂಡು ಎಲ್ಲಾ ಮೂಲಭೂತ ಸೌಲಭ್ಯದೊಂದಿಗೆ ಆನೆ ಶಿಬಿರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾಕಾನೆ ಶಿಬಿರ ಹಾಗೂ ವೃಕ್ಷೆದ್ಯಾನವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಬಿ.ಸಿ.ಸತೀಶ್, ಡಿಎಫ್‌ಒ ಪೂವಯ್ಯ, ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್‌ನಾಯಕ್, ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ.ಚಂದ್ರ, ಡಿವೈಎಸ್ಪಿ ಗಂಗಾಧರ್, ಸಿಐ ಮಹೇಶ್, ಎಸಿಎಫ್ ಗೋಪಾಲ್, ಆರ್‌ಎಫ್‌ಒ ಶಿವರಾಂ ಮತ್ತಿತರರು ಇದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago