ಜಿಲ್ಲೆಗಳು

25ಕ್ಕೆ ಕುಸಿದ ಕೊಡಗು ಜಿ.ಪಂ. ಕ್ಷೇತ್ರಗಳ ಸಂಖ್ಯೆ

ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ 4 ಕ್ಷೇತ್ರ ಕಡಿಮೆ: ೫ ತಾಲ್ಲೂಕು ಪಂಚಾಯಿತಿಗಳ ಪುನರ್ವಿಂಗಡಣೆ

ಮಡಿಕೇರಿ: ಸರ್ಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 26 ಜಿ.ಪಂ. ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳು ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಜಿ.ಪಂ. ಕ್ಷೇತ್ರ 25ಕ್ಕೆ ಕುಸಿದಿದೆ.
ಕೊಡಗು ಜಿಲ್ಲೆಯಲ್ಲಿದ್ದ 29 ಜಿ.ಪಂ. ಕ್ಷೇತ್ರಗಳನ್ನು 25 ಕ್ಷೇತ್ರಗಳಿಗೆ ಪುನರ್ವಿಂಗಡಣೆ ಮಾಡಲಾಗಿದೆ. ಮಡಿಕೇರಿ ತಾಲ್ಲೂಕಿನ ಮಕ್ಕಂದೂರು, ಕಾಂತೂರು ಮೂರ್ನಾಡು, ನಾಪೋಕ್ಲು, ಸಂಪಾಜೆ, ಭಾಗಮಂಡಲ, ಚೆಯ್ಯಂಡಾಣೆ (ನರಿಯಂದಡ), ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ, ಶನಿವಾರಸಂತೆ, ಬಳಗುಂದ, ಶಾಂತಳ್ಳಿ, ಮಾದಾಪುರ, ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು, ಗುಡ್ಡೆಹೊಸೂರು, ಕೂಡುಮಂಗಳೂರು, ಕೂಡಿಗೆ, ಸುಂಟಿಕೊಪ್ಪ, ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ, ಚೆನ್ನಯ್ಯನಕೋಟೆ, ಅಮ್ಮತ್ತಿ, ಕಾಕೋಟುಪರಂಬು, ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ, ಗೋಣಿಕೊಪ್ಪಲು, ತಿತಿಮತಿ, ಶ್ರೀಮಂಗಲ, ಪೊನ್ನಂಪೇಟೆ ಕ್ಷೇತ್ರಗಳಾಗಿ ಪುನರ್ವಿಂಗಡಣೆ ಮಾಡಲಾಗಿದೆ.

andolanait

Recent Posts

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

1 hour ago

ಹಾಸನ| ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಆರೋಪ: ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…

1 hour ago

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…

2 hours ago

4 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…

2 hours ago

ಜೈಲಿಗೆ ಹೋಗಿ ಬಂದ್ರೂ ಬುದ್ಧಿ ಕಲಿಯದ ರಜತ್:‌ ಮತ್ತೊಂದು ಯಡವಟ್ಟು.!

ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್‌ ಸೇದುತ್ತಾ ರಜತ್‌ ಫೋಟೋಶೂಟ್‌ ಮಾಡಿಸಿದ್ದು, ಬಿಗ್‌ಬಾಸ್‌ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…

3 hours ago

ಮೈಸೂರು: ಲೋಕಾಯುಕ್ತ ಪೊಲೀಸರಿಂದ ಏಳು ಕಡೆ ದಾಳಿ: ದಾಖಲೆಗಳ ಪರಿಶೀಲನೆ

ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…

3 hours ago