ಧಾನ್ಯಲಕ್ಷ್ಮಿಯನ್ನು ಕರೆ ತಂದು ಮನೆ ತುಂಬಿಸಿಕೊಂಡ ಕೊಡಗಿನ ಜನತೆ
ಮಡಿಕೇರಿ: ಕೊಡಗಿನ ಎಲ್ಲೆಡೆ ಈಗ ಹುತ್ತರಿ ಸಂಭ್ರಮ. ವರ್ಷಪೂರ್ತಿ ಅನ್ನನೀಡೋ ಧಾನ್ಯಲಕ್ಷ್ಮಿಯನ್ನು ಪೂಜಿಸಿ ಮನೆಗೊಯ್ದು ಪೊಲಿ ಪೊಲಿ ದೇವಾ, ಪೊಲಿಯೇ ದೇವಾ ಎಂದು ಶ್ರದ್ಧಾಭಕ್ತಿಯಿಂದ ನಮಿಸುವ ಈ ಹಬ್ಬ ಕೊಡವರ ಪ್ರಮುಖ ಹಬ್ಬ.
ಅಧಿಕೃತವಾಗಿ ಕೊಡಗಿನಾದ್ಯಂತ ಪುತ್ತರಿ ಮಂಗಳವಾರ ರಾತ್ರಿಯಿಂದಲೇ ಆರಂಭವಾಗಿದೆ. ಕೊಡವರ ಕುಲದೈವ ಇಗ್ಗುತಪ್ಪನ ಸನ್ನಿದಿಯಲ್ಲಿ ನೆಲ್ಲಕ್ಕಿಯಲ್ಲಿ ಅಕ್ಕಿ ಹಾಕಿ ನೆರೆಕಟ್ಟುವ ಮೂಲಕ ಇದಕ್ಕೆ ಚಾಲನೆ ನೀಡಲಾಯಿತು.
ಹಬ್ಬದ ಸಂಭ್ರಮದಲ್ಲಿರುವ ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಗದ್ದೆಯಿಂದ ತಂದ ಭತ್ತದ ಪೈರನ್ನು ಕಣದಲ್ಲಿರಿಸಿ ಜಾನಪದ ನೃತ್ಯಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಧಾನ್ಯ ಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ವೇಳೆ ಎಲ್ಲರೂ ಸಾಮೂಹಿಕವಾಗಿ ಕೈಯಲ್ಲಿ ಕತ್ತಿ ಹಿಡಿದು ನೃತ್ಯಮಾಡಿದರು. ಹೊಸ ಅರಿ ಎಂದರೆ ಹೊಸ ಭತ್ತವನ್ನು ಮನೆಗೊಯ್ದು ಪೂಜಿಸಿದರು. ಬಳಿಕ ಕದಿರು ತೆಗೆದ ಭತ್ತದಿಂದ ಪಾಯಸ ತಯಾರಿಸಿ ಮನೆ ಮಂದಿ ಮತ್ತು ನೆಂಟರಿಷ್ಟರೆಲ್ಲರೂ ಸೇವಿಸಿ ಸಂಭ್ರಮಿಸಿದರು. ಹುತ್ತರಿಯ ಪ್ರಯುಕ್ತ ತಂಬಿಟ್ಟು, ವಿಶಿಷ್ಟ ಹುತ್ತರಿ ಗೆಣಸು, ಕಡಂಬಿಟ್ಟು ತಯಾರಿಸುತ್ತಾರೆ. ಬೇರೆ ಬೇರೆ ಕಡೆ ನೆಲೆಸಿರುವ ಎಲ್ಲಾ ಕೊಡವರು ಈ ಹಬ್ಬಕ್ಕೆ ಕೊಡಗಿಗೆ ಬಂದು ನೆಂಟರಿಷ್ಟರ ಜತೆ ಕಲೆಯುತ್ತಾರೆ.
ಪ್ರಕೃತಿಯೊಂದಿಗೆ ಹೊಂದಿಕೊಂಡ ಕೊಡಗಿನ ಜನರ ಆಚಾರದ ಸಂಕೇತವಾಗಿ ಐದು ಬಗೆಯ ಹಸಿರು ಮರದ ಎಲೆಗಳಾದ ಉಂಬಳಿ, ಹಲಸು, ಗೇರು, ಮಾವು ಸೇರಿದಂತೆ ಐದು ಬಗೆಯ ಹಸಿರೆಲೆಗಳನ್ನು ಒಟ್ಟುಗೂಡಿಸಿ ನೆರೆಕಟ್ಟಿ ಗುರುಕಾರಣಿಕರಿಗೆ -ದೈವಕ್ಕೆ ನಮಿಸುವುದು ವಾಡಿಕೆ.
ಪ್ರಾಕೃತಿಕ ವಿಕೋಪ ಮತ್ತು ಕೊರೋನಾದಿಂದ ನಲುಗಿದ ಕೊಡಗಿನಲ್ಲಿ ಮೂರು ವರ್ಷಗಳ ಬಳಿಕ ಹುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾಗುಲು ಐನ್ ಮನೆಯಲ್ಲಿ ರವೀಂದ್ರ ನೇತೃತ್ವದಲ್ಲಿ ಹುತ್ತರಿ ಹಬ್ಬದ ಆಚರಣೆ ನಡೆಯಿತು.
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…