ಧಾನ್ಯಲಕ್ಷ್ಮಿಯನ್ನು ಕರೆ ತಂದು ಮನೆ ತುಂಬಿಸಿಕೊಂಡ ಕೊಡಗಿನ ಜನತೆ
ಮಡಿಕೇರಿ: ಕೊಡಗಿನ ಎಲ್ಲೆಡೆ ಈಗ ಹುತ್ತರಿ ಸಂಭ್ರಮ. ವರ್ಷಪೂರ್ತಿ ಅನ್ನನೀಡೋ ಧಾನ್ಯಲಕ್ಷ್ಮಿಯನ್ನು ಪೂಜಿಸಿ ಮನೆಗೊಯ್ದು ಪೊಲಿ ಪೊಲಿ ದೇವಾ, ಪೊಲಿಯೇ ದೇವಾ ಎಂದು ಶ್ರದ್ಧಾಭಕ್ತಿಯಿಂದ ನಮಿಸುವ ಈ ಹಬ್ಬ ಕೊಡವರ ಪ್ರಮುಖ ಹಬ್ಬ.
ಅಧಿಕೃತವಾಗಿ ಕೊಡಗಿನಾದ್ಯಂತ ಪುತ್ತರಿ ಮಂಗಳವಾರ ರಾತ್ರಿಯಿಂದಲೇ ಆರಂಭವಾಗಿದೆ. ಕೊಡವರ ಕುಲದೈವ ಇಗ್ಗುತಪ್ಪನ ಸನ್ನಿದಿಯಲ್ಲಿ ನೆಲ್ಲಕ್ಕಿಯಲ್ಲಿ ಅಕ್ಕಿ ಹಾಕಿ ನೆರೆಕಟ್ಟುವ ಮೂಲಕ ಇದಕ್ಕೆ ಚಾಲನೆ ನೀಡಲಾಯಿತು.
ಹಬ್ಬದ ಸಂಭ್ರಮದಲ್ಲಿರುವ ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಗದ್ದೆಯಿಂದ ತಂದ ಭತ್ತದ ಪೈರನ್ನು ಕಣದಲ್ಲಿರಿಸಿ ಜಾನಪದ ನೃತ್ಯಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಧಾನ್ಯ ಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ ವೇಳೆ ಎಲ್ಲರೂ ಸಾಮೂಹಿಕವಾಗಿ ಕೈಯಲ್ಲಿ ಕತ್ತಿ ಹಿಡಿದು ನೃತ್ಯಮಾಡಿದರು. ಹೊಸ ಅರಿ ಎಂದರೆ ಹೊಸ ಭತ್ತವನ್ನು ಮನೆಗೊಯ್ದು ಪೂಜಿಸಿದರು. ಬಳಿಕ ಕದಿರು ತೆಗೆದ ಭತ್ತದಿಂದ ಪಾಯಸ ತಯಾರಿಸಿ ಮನೆ ಮಂದಿ ಮತ್ತು ನೆಂಟರಿಷ್ಟರೆಲ್ಲರೂ ಸೇವಿಸಿ ಸಂಭ್ರಮಿಸಿದರು. ಹುತ್ತರಿಯ ಪ್ರಯುಕ್ತ ತಂಬಿಟ್ಟು, ವಿಶಿಷ್ಟ ಹುತ್ತರಿ ಗೆಣಸು, ಕಡಂಬಿಟ್ಟು ತಯಾರಿಸುತ್ತಾರೆ. ಬೇರೆ ಬೇರೆ ಕಡೆ ನೆಲೆಸಿರುವ ಎಲ್ಲಾ ಕೊಡವರು ಈ ಹಬ್ಬಕ್ಕೆ ಕೊಡಗಿಗೆ ಬಂದು ನೆಂಟರಿಷ್ಟರ ಜತೆ ಕಲೆಯುತ್ತಾರೆ.
ಪ್ರಕೃತಿಯೊಂದಿಗೆ ಹೊಂದಿಕೊಂಡ ಕೊಡಗಿನ ಜನರ ಆಚಾರದ ಸಂಕೇತವಾಗಿ ಐದು ಬಗೆಯ ಹಸಿರು ಮರದ ಎಲೆಗಳಾದ ಉಂಬಳಿ, ಹಲಸು, ಗೇರು, ಮಾವು ಸೇರಿದಂತೆ ಐದು ಬಗೆಯ ಹಸಿರೆಲೆಗಳನ್ನು ಒಟ್ಟುಗೂಡಿಸಿ ನೆರೆಕಟ್ಟಿ ಗುರುಕಾರಣಿಕರಿಗೆ -ದೈವಕ್ಕೆ ನಮಿಸುವುದು ವಾಡಿಕೆ.
ಪ್ರಾಕೃತಿಕ ವಿಕೋಪ ಮತ್ತು ಕೊರೋನಾದಿಂದ ನಲುಗಿದ ಕೊಡಗಿನಲ್ಲಿ ಮೂರು ವರ್ಷಗಳ ಬಳಿಕ ಹುತ್ತರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾಗುಲು ಐನ್ ಮನೆಯಲ್ಲಿ ರವೀಂದ್ರ ನೇತೃತ್ವದಲ್ಲಿ ಹುತ್ತರಿ ಹಬ್ಬದ ಆಚರಣೆ ನಡೆಯಿತು.
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…