ಜಿಲ್ಲೆಗಳು

ಕೊಡಗಿನ ಕೈಲ್ ಮುಹೂರ್ತ ಹಬ್ಬ : ಸಿಎಂ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯ

ಮಡಿಕೇರಿ: ಕೊಡಗಿನ ಕೈಲ್ ಪೋಳ್ದ್ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಗಣ್ಯರು ಶುಭ ಕೋರಿದ್ದಾರೆ. ಸಮಸ್ತ ಕೊಡವ ಬಾಂಧವರಿಗೆ ಕೈಲ್ ಪೋಳ್ದ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊಡಗಿನ ರೈತಾಪಿ ವರ್ಗ ತಾನು ದಿನನಿತ್ಯ ಬಳಸುವ ಆಯುಧಗಳಿಗೆ ಪೂಜೆ ಸಲ್ಲಿಸುವ ಮೂಲಕ ಕೃತಜ್ಞತಾ ಭಾವವನ್ನು ಸಂಭ್ರಮ, ಸಡಗರದಿಂದ ಆಚರಿಸುವ ಹಬ್ಬ ಇದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಶುಭ ಕೋರಿದ್ದು, ನಾಡಿನ ಸಮಸ್ತ ಜನತೆಗೆ ಕೈಲ್ ಪೋದ್ ಹಬ್ಬದ ಶುಭಾಶಯಗಳು. ಈ ಹಬ್ಬವುಎಲ್ಲರ ಬಾಳಲ್ಲಿ ಸುಖ ಹಾಗೂ ಸಮೃದ್ಧಿ ತರಲಿ ಎಂದು ಪ್ರಾರ್ಥಿಸುತ್ತೇವೆ ಎಂಬುವುದಾಗಿ ಟ್ವೀಟ್ ಮಾಡಿದ್ದಾರೆ.


ಸಚಿವ ಡಾ. ಸುಧಾಕರ್ ಕೂಡ ಆಯುಧ ಪೂಜೆಯ ಚಿತ್ರವನ್ನು ಟ್ವೀಟ್ ಮಾಡುವುದರೊಂದಿಗೆ ಕೊಡಗಿನ ಕೈಲ್ ಮುಹೂರ್ತ ಹಬ್ಬಕ್ಕೆ ಶುಭ ಕೋರಿದ್ದಾರೆ. ಹಲವು ಗಣ್ಯರು ಕೂಡ ಶುಭ ಕೋರಿದ್ದಾರೆ.

ಸಾಂಪ್ರದಾಯಿಕ ಆಯುಧಗಳಿಗೆ ವಿಶೇಷ ಪೂಜೆ :

ಪ್ರಾಕೃತಿಕ ವಿಕೋಪ, ಪ್ರವಾಹ, ಕೋವಿಡ್ ಸಂಕಷ್ಟ ಹೀಗೆ ೪ ವರ್ಷದ ನಂತರ ಜಿಲ್ಲೆಯಾಧ್ಯಂತ ಕೈಲ್ ಮುಹೂರ್ತ ಹಬ್ಬವನ್ನು ಆಚರಿಸಲಾಯಿತು. ಕೃಷಿ ಚಟುವಟಿಕೆಯಲ್ಲಿ ತೊಡಗಿ ನಾಟಿಕಾರ್ಯ ಮುಗಿಸಿದ್ದ ರೈತರು, ಕೃಷಿ ಪರಿಕರ ಮತ್ತು ಕೊಡಗಿನ ಸಾಂಪ್ರದಾಯಿಕ ಆಯುಧಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.


ಕೈಲ್ ಮುಹೂರ್ತ ಹಬ್ಬದಲ್ಲಿ ಕೋವಿ ಪೂಜಿಸಲು ’ತೋಕುಪೂ’ ಬಳಸುವುದು ವಿಶೇಷವಾಗಿದೆ. ತೋಕು ಎಂದರೆ ಕೋವಿ, ಪೂ ಎಂದರೆ ಹೂವು ಎಂದರ್ಥ. ಕಾಡುಗಳಲ್ಲಿ ಬೆಳೆಯುವ ಸುಂದರವಾದ ಈ ಹೂವು ಕೈಲು ಮುಹೂರ್ತ ಹಬ್ಬದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಈ ಹೂವನ್ನು ಕಾಡಿನಿಂದ ತಂದು ಕೋವಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೈಲ್ ಮುಹೂರ್ತ ಹಬ್ಬದ ನಂತರ ಕತ್ತಿ, ಕೋವಿಗಳು ಬಳಕೆಯಾದರೆ ಅಲ್ಲಿಯವರೆಗೆ ವ್ಯವಸಾಯದಲ್ಲಿ ಬಳಕೆಯಾದ ನೇಗಿಲು, ನೊಗ ಇತ್ಯಾದಿ ಉಪಕರಣಗಳಿಗೆ ವಿರಾಮ ದೊರೆಯುತ್ತದೆ. ಈ ಎಲ್ಲಾ ಉಪಕರಣ ತೊಳೆದು ಪೂಜೆ ಸಲ್ಲಿಸಲಾಯಿತು. ಉಳುಮೆ ಮಾಡಿದ ಎತ್ತುಗಳ ಮೈ ತೊಳೆದು ಅವುಗಳಿಗೆ ಕುಂಕುಮ, ಗಂಧ ಹಚ್ಚಿ ಅಲಂಕರಿಸಲಾಗಿತ್ತು. ಕೈಲು ಮುಹೂರ್ತ ಹಬ್ಬದ ವಿಶೇಷವಾಗಿರುವ ಕಡಂಬಿಟ್ಟು ಹಾಗೂ ಹಂದಿ ಮಾಂಸದ ಊಟ ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಸೇವಿಸಿದರು.

ವಿಶೇಷ ಖಾದ್ಯದ ಊಟದ ಬಳಿಕ ಎಲ್ಲರೂ ಊರ್ ಮಂದ್‌ನಲ್ಲಿ ಸೇರಿ ಅಲ್ಲಿ ಕೋವಿಯ ಮೂಲಕ ತೆಂಗಿನ ಕಾಯಿಗೆ ಗುಂಡು ಹಾರಿಸಿ ಹಬ್ಬ ಆಚರಿಸಲಾಯಿತು. ಮರದ ತುದಿಗೆ ತೆಂಗಿನಕಾಯಿ ಕಟ್ಟಿ ಅದಕ್ಕೆ ಗುಂಡು ಹೊಡೆಯುವುದು ವಾಡಿಕೆ ಮತ್ತು ಇದು ಜನಪದೀಯ ಕ್ರೀಡೆಗಳಲ್ಲಿ ಒಂದಾಗಿದೆ.

ಇತ್ತೀಚೆಗೆ ಹಬ್ಬದ ಬಹುತೇಕ ಆಚರಣೆಗಳು ಮರೆಯಾಗಿವೆಯಾದರೂ ಹಿರಿಯರು ಯುವ ಸಮೂಹದಲ್ಲಿ ಕೊಡಗಿನ ಹಬ್ಬ, ಸಂಸ್ಕೃತಿಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ.
ಮಾಂಸ ಖರೀದಿ: ಹಬ್ಬಕ್ಕೆ ಮುಖ್ಯ ಖಾದ್ಯವಾಗಿರುವ ಹಂದಿ ಮಾಂಸಕ್ಕಾಗಿ ಸಾರ್ವಜನಿಕರು ನಗರದ ಮಳಿಗೆಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ಮಾಂಸ ಖರೀದಿಸಿದರು. ಬಿಸಿಲಿನ ವಾತಾವರಣ ಇದ್ದ ಹಿನ್ನೆಲೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಮಾಂಸ, ಮದ್ಯ ಖರೀದಿಸಿ ಮನೆಯತ್ತ ಸಾಗಿದರು.

andolanait

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

7 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

30 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

2 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

2 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago