ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿ, ತಾಲ್ಲೂಕು ಸಮಿತಿ ಹಾಗೂ ಹೋಬಳಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಭೆುಂಲ್ಲಿ ಜಿಲ್ಲಾ ಕೇಂದ್ರದಲ್ಲಿ ತುಳು ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ತುಳು ಭಾಷಿಕ ಸಮುದಾಯಗಳಿದ್ದು, ಸುಮಾರು 1.50 ಲಕ್ಷಕ್ಕಿಂತಲೂ ಹೆಚ್ಚು ತುಳು ಭಾಷಿಕರಿದ್ದಾರೆ. ಎಲ್ಲ ತುಳು ಸಮುದಾಯವನ್ನು ಒಂದೇ ವೇದಿಕೆಯಡಿ ತರಲು ತುಳು ಸಮ್ಮೇಳನ ನಡೆಸುವುದು ಸೂಕ್ತ ಎಂದು ಅಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಟದ ಸ್ಥಾಪಕ ಕಾರ್ಯದರ್ಶಿ ಹರೀಶ್ ಆಳ್ವ ಮಂಗಳೂರು, ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದ ರಘು, ಸಂಘಟನಾ ಕಾರ್ಯದರ್ಶಿ ರಾಜೀವ್ ಲೋಚನ, ಖಜಾಂಚಿ ಪ್ರಭು ರೈ, ಮಡಿಕೇರಿ ನಗರ ಅಧ್ಯಕ್ಷೆ ಸಾವಿತ್ರಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಶಬರಿ ಶೆಟ್ಟಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಮಡಿಕೇರಿ ತಾಲ್ಲೂಕು ಸಂಚಾಲಕ ಪ್ರಸಾದ್ ಬಿಳಿಗೇರಿ, ಉಪಾಧ್ಯಕ್ಷ ಪಿ.ಸಿ.ಲೋಹಿತ್, ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ, ವಿವಿಧ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು.
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…