ಜಿಲ್ಲೆಗಳು

ಕೊಡಗು : ಜಿಲ್ಲಾ ತುಳು ಸಮ್ಮೇಳನ ನಡೆಸಲು ನಿರ್ಧಾರ

ಮಡಿಕೇರಿ: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿ, ತಾಲ್ಲೂಕು ಸಮಿತಿ ಹಾಗೂ ಹೋಬಳಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಸಭೆುಂಲ್ಲಿ ಜಿಲ್ಲಾ ಕೇಂದ್ರದಲ್ಲಿ ತುಳು ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ 15ಕ್ಕೂ ಹೆಚ್ಚು ತುಳು ಭಾಷಿಕ ಸಮುದಾಯಗಳಿದ್ದು, ಸುಮಾರು 1.50 ಲಕ್ಷಕ್ಕಿಂತಲೂ ಹೆಚ್ಚು ತುಳು ಭಾಷಿಕರಿದ್ದಾರೆ. ಎಲ್ಲ ತುಳು ಸಮುದಾಯವನ್ನು ಒಂದೇ ವೇದಿಕೆಯಡಿ ತರಲು ತುಳು ಸಮ್ಮೇಳನ ನಡೆಸುವುದು ಸೂಕ್ತ ಎಂದು ಅಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಟದ ಸ್ಥಾಪಕ ಕಾರ್ಯದರ್ಶಿ ಹರೀಶ್ ಆಳ್ವ ಮಂಗಳೂರು, ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದ ರಘು, ಸಂಘಟನಾ ಕಾರ್ಯದರ್ಶಿ ರಾಜೀವ್ ಲೋಚನ, ಖಜಾಂಚಿ ಪ್ರಭು ರೈ, ಮಡಿಕೇರಿ ನಗರ ಅಧ್ಯಕ್ಷೆ ಸಾವಿತ್ರಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಶಬರಿ ಶೆಟ್ಟಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಮಡಿಕೇರಿ ತಾಲ್ಲೂಕು ಸಂಚಾಲಕ ಪ್ರಸಾದ್ ಬಿಳಿಗೇರಿ, ಉಪಾಧ್ಯಕ್ಷ ಪಿ.ಸಿ.ಲೋಹಿತ್, ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ, ವಿವಿಧ ಘಟಕಗಳ ಪ್ರಮುಖರು ಉಪಸ್ಥಿತರಿದ್ದರು.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

11 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

11 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

11 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

12 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

13 hours ago